ಮದರಸಾಗಳಲ್ಲಿ ದೇಶ ವಿರೋಧಿ ಚಟುವಟಿಕೆ ಹೇಳಿಕೊಡಲಾಗುತ್ತದೆ ಅಂತ ಯತ್ನಾಳ್ ಹೇಳಿದಾಗ ಸದನದಲ್ಲಿ ಗಲಾಟೆ

Updated on: Mar 20, 2025 | 6:47 PM

ರಿಜ್ವಾನ್ ಅರ್ಷದ್ ಮಾತಾಡವಾಗ ಯತ್ನಾಳ್​​ರನ್ನು ದೇಶ ವಿರೋಧಿ, ದೇಶ ದ್ರೋಹಿ ಅಂತೆಲ್ಲ ಕರೆಯುತ್ತಾರೆ. ಯತ್ನಾಳ್ ಮಾತಾಡುವುದು ಕೇಳಿಸಲ್ಲ. ಎಂಬಿ ಪಾಟೀಲ್ ಮಾತಾಡುವುದು ಸಹ ಕೇಳಿಸಲ್ಲ, ಏತನ್ಮಧ್ಯೆ ಕಾಂಗ್ರೆಸ್ ಸದಸ್ಯರೊಬ್ಬರು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಮಾತುಗಳನ್ನಾಡಿರುವ ಯತ್ನಾಳ್ ಅವರನ್ನು ಸದನದಿಂದ ಸಸ್ಪೆಂಡ್ ಮಾಡಿ ಎಂದು ಹೇಳುತ್ತಾರೆ.

ಬೆಂಗಳೂರು, ಮಾರ್ಚ್ 20:  ಸದನದಲ್ಲಿ ಬಜೆಟ್ ಮೇಲೆ ಮಾತಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಲ್ಪಸಂಖ್ಯಾತರಿಗೆ ನೀಡಿದ ಅನುದಾನದ ಬಗ್ಗೆ ಹೇಳುತ್ತಾ, ಮದರಸಾಗಳಲ್ಲಿ ಧಾರ್ಮಿಕ ವಿಷಯವನ್ನಲ್ಲದೆ ದೇಶವಿರೋಧಿ ಚಟುವಟಿಕೆಗಳ ಬಗ್ಗೆ ಹೇಳಿಕೊಡಲಾಗುತ್ತದೆ ಎಂದಾಗ ಸದನದಲ್ಲಿ ಕೋಲಾಹಲವೆದ್ದಿತು. ಶಿವಾಜಿನಗರದ ಶಾಸಕ ರಿಜ್ವಾನ್ ಅರ್ಷದ್ ಎದ್ದು ನಿಂತು, ಏನು ಮಾತಾಡ್ತಾ ಇದ್ದೀರ ಸ್ವಾಮಿ ನೀವು? ಸದನದ ಹಿರಿಯರಲ್ಲಿ ಒಬ್ಬರಾಗಿರುವ ನೀವು ಸಮಾಜದ ಸಾಮರಸ್ಯ ಕದಡುವ ಮಾತಾಡಬಾರದು ಎನ್ನುತ್ತಾರೆ. ಯತ್ನಾಳ್ ಅದೇ ಧಾಟಿಯಲ್ಲಿ ಮುಂದುವರಿಸಿದಾಗ ಸಚಿವ ಎಂಬಿ ಪಾಟೀಲ್ ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯರು ಅವರ ಮೇಲೆ ಮುಗಿ ಬೀಳುತ್ತಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Karnataka Budget Session; ಕಾಂಗ್ರೆಸ್ ಸರ್ಕಾರಕ್ಕೆ ಸಮಾನತೆ ಹೇಳಲಷ್ಟೇ ಬೇಕು, ಕಾರ್ಯರೂಪದಲ್ಲಿ ತರಲಲ್ಲ: ಧೀರಜ್ ಮುನಿರಾಜ್  

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More