ಬಿಕೆ ಹರಿಪ್ರಸಾದ್ ಅಸಮಾಧಾನ ಶಮನಗೊಳಿಸಲು ಅವರ ಮನೆಗೆ ಹೋದ ಜಿ ಪರಮೇಶ್ವರ್ ಮತ್ತು ಸತೀಶ್ ಜಾರಕಿಹೊಳಿ

ಮೂಲಗಳ ಪ್ರಕಾರ, ಹರಿಪ್ರಸಾದ್ ಅಸಮಾಧಾನವನ್ನು ಶಮನಗೊಳಿಸುವಂತೆ ಮತ್ತು ಅವರು ಸಾರ್ವಜನಿಕ ಸಮಾರಂಭಗಳಲ್ಲಿ ಎಚ್ಚರದಿಂದ ಮಾತಾಡಲು ತಿಳಿಸುವಂತೆ ಹೈಕಮಾಂಡ್ ನಿಂದ ಇಬ್ಬರು ಸಚಿವರಿಗೆ ಸೂಚನೆ ಸಹ ಬಂದಿದೆ. ಹಾಗಾಗೇ, ಅವರು ಹರಿಪ್ರಸಾದ್ ಮನೆಗೆ ಆಗಮಿಸಿ ಅವರೊಂದಿಗೆ ಊಟ ಮಾಡುತ್ತಾ ಮಾತುಕತೆ ನಡೆಸಿದರು.

|

Updated on: Sep 15, 2023 | 10:43 AM

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ (BK Hariprasad) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಸಾರ್ವಜನಿಕವಾಗಿ ವಾಗ್ದಾಳಿ ನಡೆಸಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದಾರೆಂದು ಅವರ ವಿರುದ್ಧ ಈಗಾಗಲೇ ಹೈಕಮಾಂಡ್ ಗೆ ದೂರು ಸಲ್ಲಿಸಲಾಗಿದೆ ಮತ್ತು ದೆಹಲಿ ವರಿಷ್ಠರು ಪ್ರಸಾದ್ ಗೆ ತಾಕೀತು ಮಾಡಿಯೂ ಆಗಿದೆ. ಮೊನ್ನೆ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಈಡಿಗ ಸಮುದಾಯದ ಸಮಾವೇಶದಲ್ಲಿ ಅವರು ಗೃಹ ಸಚಿವ ಜಿ ಪರಮೇಶ್ವರ (G Parameshwara) ಹಾಗೂ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರ ಬಗ್ಗೆಯೂ ಮಾತಾಡಿದ್ದರು. ಪ್ರಬುದ್ಧ ರಾಜಕಾರಣಿಗಳಾಗಿರುವ ಪರಮೇಶ್ವರ್ ಮತ್ತು ಜಾರಕಿಹೊಳಿ ಸಾರ್ವಜನಿಕವಾಗಿ ಪ್ರತಿಕ್ರಿಯಿಸದೆ ಖುದ್ದು ಹರಿಪ್ರಸಾದ್ ಅವರ ಮನೆಗೆ ಬಂದು ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಹರಿಪ್ರಸಾದ್ ಅಸಮಾಧಾನವನ್ನು ಶಮನಗೊಳಿಸುವಂತೆ ಮತ್ತು ಅವರು ಸಾರ್ವಜನಿಕ ಸಮಾರಂಭಗಳಲ್ಲಿ ಎಚ್ಚರದಿಂದ ಮಾತಾಡಲು ತಿಳಿಸುವಂತೆ ಹೈಕಮಾಂಡ್ ನಿಂದ ಇಬ್ಬರು ಸಚಿವರಿಗೆ ಸೂಚನೆ ಸಹ ಬಂದಿದೆ. ಹಾಗಾಗೇ, ಅವರು ಹರಿಪ್ರಸಾದ್ ಮನೆಗೆ ಆಗಮಿಸಿ ಅವರೊಂದಿಗೆ ಊಟ ಮಾಡುತ್ತಾ ಮಾತುಕತೆ ನಡೆಸಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಚನ್ನಪಟ್ಟಣದ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಧಾರ್ಮಿಕ ಆಚರಣೆಗೆ ಅಡ್ಡಿ ಮಾಡುವುದನ್ನು ಸರ್ಕಾರ ಸಹಿಸಲ್ಲ: ಸಿದ್ದರಾಮಯ್ಯ
ಧಾರ್ಮಿಕ ಆಚರಣೆಗೆ ಅಡ್ಡಿ ಮಾಡುವುದನ್ನು ಸರ್ಕಾರ ಸಹಿಸಲ್ಲ: ಸಿದ್ದರಾಮಯ್ಯ