ಪೋಷಕರು ಆತಂಕಪಡೋದು ಬೇಡ, ಬಾಂಬ್ ನಿಷ್ಕ್ರಿಯ ದಳ ಬೆದರಿಕೆ ಮೇಲ್ ಬಂದ ಶಾಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ: ಬಿ ದಯಾನಂದ, ಪೊಲೀಸ್ ಆಯುಕ್ತ

Bomb Threats to Schools; ಈ ಚೇಷ್ಟೆಯನ್ನು ಕಿಡಿಗೇಡಿತನ ಅಂತ ಹೇಳಲಾಗಲ್ಲ, ಇದೊಂದು ದೊಡ್ಡ ಅಪರಾಧ. ಬೆದರಿಕೆಯ ಈಮೇಲ್ ಬಂದಿರುವ ಶಾಲೆಗಳಲ್ಲಿ ಓದುವ ಮಕ್ಕಳು ಮತ್ತು ಪೋಷಕರು ಅನುಭವಿಸುವ ಭೀತಿ ಮತ್ತು ಆತಂಕದ ಬಗ್ಗೆ ಯೋಚಿಸಿ ನೋಡಿ. ತಂದೆತಾಯಿಗಳಿಬ್ಬರೂ ಉದ್ಯೋಗಸ್ಥರಾಗಿದ್ದು ತಮ್ಮ ತಮ್ಮ ಕಚೇರಿಗಳಿಗೆ ಹೋಗಿದ್ದಾಗ ವಿಷಯ ಗೊತ್ತಾಗಿ ಬೆಂಗಳೂರಿನ ಟ್ರಾಫಿಕ್ ನಲ್ಲಿ ಆವರು ತಮ್ಮ ಮಗ/ಮಗಳು ಓದುವ ಶಾಲೆಗೆ ಆತಂಕದಲ್ಲಿ ಧಾವಿಸುವ ದೃಶ್ಯವನ್ನು ಕಲ್ಪಿಸಿಕೊಳ್ಳಿ. ನಮಗೂ ಹೆದರಿಕೆಯಾಗುತ್ತದೆ. ದುಷ್ಟರಿಗೆ ಭಾರೀ ಪ್ರಮಾಣದ ಶಿಕ್ಷೆಯಾಗಬೇಕು.

ಪೋಷಕರು ಆತಂಕಪಡೋದು ಬೇಡ, ಬಾಂಬ್ ನಿಷ್ಕ್ರಿಯ ದಳ ಬೆದರಿಕೆ ಮೇಲ್ ಬಂದ ಶಾಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ: ಬಿ ದಯಾನಂದ, ಪೊಲೀಸ್ ಆಯುಕ್ತ
|

Updated on:Dec 01, 2023 | 2:06 PM

ಬೆಂಗಳೂರು: ವಿಕೃತ ಮನಸ್ಸಿನ ದುಷ್ಟರು ಮತ್ತೊಮ್ಮೆ ನಗರದ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆಯ ಈಮೇಲ್ ಗಳನ್ನು ಕಳಿಸಿ ದಾರ್ಷ್ಟ್ಯತೆ ಮೆರೆದಿದ್ದಾರೆ. ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಬೆಂಗಳೂರು ಪೊಲೀಸ್ ಕಮೀಶನರ್ (Bengaluru police commissioner) ಬಿ ದಯಾನಂದ (B Dayanand), ಪೋಷಕರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ, ಬಾಂಬ್ ಪತ್ತೆ ದಳ (bomb squad) ಮತ್ತು ನಿಷ್ಕ್ರಿಯ ದಳಗಳನ್ನು ಬೆದರಿಕೆಗೊಳಗಾಗಿರುವ ಎಲ್ಲ ಶಾಲೆಗಳಿಗೆ ಕಳಿಸಲಾಗಿದ್ದು ಅವರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಕಳೆದ ಸಲದ ಹಾಗೆ ಈ ಬಾರಿಯೂ ಕಿಡಿಗೇಡಿಗಳ ಹುಸಿ ಬೆದರಿಕೆ ಕರೆಗಳಾಗಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತ ಹೇಳಿದರು. ಹಿಂದೆ ಹೀಗೆಯೇ ಶಾಲೆಗಳಿಗೆ ಹುಸಿ ಬೆದರಿಕೆಯ ಕರೆ ಮತ್ತು ಈಮೇಲ್ ಗಳು ಬಂದಾಗ ಪರಿಶೀಲನೆ ನಡೆಸಿ ಪತ್ತೆ ಮಾಡಲಾಗಿತ್ತು ಎಂದು ಆಯುಕ್ತರು ಹೇಳಿದರಾದರೂ ಆ ಕಿಡಿಗೇಡಿಗಳು ಯಾರು ಅವರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಲಾಗಿತ್ತು ಅನ್ನೋದನ್ನು ಹೇಳಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:32 am, Fri, 1 December 23

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ