AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರು ಆತಂಕಪಡೋದು ಬೇಡ, ಬಾಂಬ್ ನಿಷ್ಕ್ರಿಯ ದಳ ಬೆದರಿಕೆ ಮೇಲ್ ಬಂದ ಶಾಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ: ಬಿ ದಯಾನಂದ, ಪೊಲೀಸ್ ಆಯುಕ್ತ

ಪೋಷಕರು ಆತಂಕಪಡೋದು ಬೇಡ, ಬಾಂಬ್ ನಿಷ್ಕ್ರಿಯ ದಳ ಬೆದರಿಕೆ ಮೇಲ್ ಬಂದ ಶಾಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ: ಬಿ ದಯಾನಂದ, ಪೊಲೀಸ್ ಆಯುಕ್ತ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Dec 01, 2023 | 2:06 PM

Share

Bomb Threats to Schools; ಈ ಚೇಷ್ಟೆಯನ್ನು ಕಿಡಿಗೇಡಿತನ ಅಂತ ಹೇಳಲಾಗಲ್ಲ, ಇದೊಂದು ದೊಡ್ಡ ಅಪರಾಧ. ಬೆದರಿಕೆಯ ಈಮೇಲ್ ಬಂದಿರುವ ಶಾಲೆಗಳಲ್ಲಿ ಓದುವ ಮಕ್ಕಳು ಮತ್ತು ಪೋಷಕರು ಅನುಭವಿಸುವ ಭೀತಿ ಮತ್ತು ಆತಂಕದ ಬಗ್ಗೆ ಯೋಚಿಸಿ ನೋಡಿ. ತಂದೆತಾಯಿಗಳಿಬ್ಬರೂ ಉದ್ಯೋಗಸ್ಥರಾಗಿದ್ದು ತಮ್ಮ ತಮ್ಮ ಕಚೇರಿಗಳಿಗೆ ಹೋಗಿದ್ದಾಗ ವಿಷಯ ಗೊತ್ತಾಗಿ ಬೆಂಗಳೂರಿನ ಟ್ರಾಫಿಕ್ ನಲ್ಲಿ ಆವರು ತಮ್ಮ ಮಗ/ಮಗಳು ಓದುವ ಶಾಲೆಗೆ ಆತಂಕದಲ್ಲಿ ಧಾವಿಸುವ ದೃಶ್ಯವನ್ನು ಕಲ್ಪಿಸಿಕೊಳ್ಳಿ. ನಮಗೂ ಹೆದರಿಕೆಯಾಗುತ್ತದೆ. ದುಷ್ಟರಿಗೆ ಭಾರೀ ಪ್ರಮಾಣದ ಶಿಕ್ಷೆಯಾಗಬೇಕು.

ಬೆಂಗಳೂರು: ವಿಕೃತ ಮನಸ್ಸಿನ ದುಷ್ಟರು ಮತ್ತೊಮ್ಮೆ ನಗರದ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆಯ ಈಮೇಲ್ ಗಳನ್ನು ಕಳಿಸಿ ದಾರ್ಷ್ಟ್ಯತೆ ಮೆರೆದಿದ್ದಾರೆ. ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಬೆಂಗಳೂರು ಪೊಲೀಸ್ ಕಮೀಶನರ್ (Bengaluru police commissioner) ಬಿ ದಯಾನಂದ (B Dayanand), ಪೋಷಕರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ, ಬಾಂಬ್ ಪತ್ತೆ ದಳ (bomb squad) ಮತ್ತು ನಿಷ್ಕ್ರಿಯ ದಳಗಳನ್ನು ಬೆದರಿಕೆಗೊಳಗಾಗಿರುವ ಎಲ್ಲ ಶಾಲೆಗಳಿಗೆ ಕಳಿಸಲಾಗಿದ್ದು ಅವರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಕಳೆದ ಸಲದ ಹಾಗೆ ಈ ಬಾರಿಯೂ ಕಿಡಿಗೇಡಿಗಳ ಹುಸಿ ಬೆದರಿಕೆ ಕರೆಗಳಾಗಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತ ಹೇಳಿದರು. ಹಿಂದೆ ಹೀಗೆಯೇ ಶಾಲೆಗಳಿಗೆ ಹುಸಿ ಬೆದರಿಕೆಯ ಕರೆ ಮತ್ತು ಈಮೇಲ್ ಗಳು ಬಂದಾಗ ಪರಿಶೀಲನೆ ನಡೆಸಿ ಪತ್ತೆ ಮಾಡಲಾಗಿತ್ತು ಎಂದು ಆಯುಕ್ತರು ಹೇಳಿದರಾದರೂ ಆ ಕಿಡಿಗೇಡಿಗಳು ಯಾರು ಅವರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಲಾಗಿತ್ತು ಅನ್ನೋದನ್ನು ಹೇಳಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Dec 01, 2023 11:32 AM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.