ಸಂಸತ್ ಮುಂಗಾರು ಅಧಿವೇಶನ: ನೀಟ್, ರಾಮಮಂದಿರ ಹಗರಣಗಳ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು, ಉಭಯ ಸದನಗಳಲ್ಲಿ ತೀವ್ರ ಗದ್ದಲ

Updated on: Jul 20, 2026 | 12:51 PM

Parliament Monsoon Session: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ವಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದವು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಯೋಧ್ಯೆ ರಾಮಮಂದಿರ ಕಾಣಿಕೆ ಕಳ್ಳತನದ ವಿಷಯಗಳ ಕುರಿತು ಚರ್ಚೆಗೆ ವಿಪಕ್ಷ ಸದಸ್ಯರು ಪಟ್ಟು ಹಿಡಿದಿದ್ದು, ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ನೀಟ್ ಅಕ್ರಮ ಮತ್ತು ಜಂತರ್‌ಮಂತರ್ ಲಾಠಿಚಾರ್ಜ್ ಬಗ್ಗೆ ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ, ಜುಲೈ 20: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ತೀವ್ರ ಗದ್ದಲ ಉಂಟಾಗಿದೆ. ವಿಪಕ್ಷ ಸದಸ್ಯರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಮತ್ತು ಅಯೋಧ್ಯೆ ರಾಮಮಂದಿರ ಕಾಣಿಕೆ ಕಳ್ಳತನದ ವಿಷಯಗಳ ಬಗ್ಗೆ ಚರ್ಚೆಗೆ ಪಟ್ಟು ಹಿಡಿದ ಪರಿಣಾಮ ಕಲಾಪ ಆರಂಭವಾಗುತ್ತಿದ್ದಂತೆ ಗದ್ದಲ ಸೃಷ್ಟಿಯಾಗಿ, ಉಭಯ ಸದನಗಳ ಕಲಾಪ ಗೊಂದಲದ ಗೂಡಾಗಿ ಮಾರ್ಪಟ್ಟಿದೆ. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಬಗ್ಗೆ ಪ್ರಸ್ತಾಪಿಸಿದ್ದು, ಈ ಹಗರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜಂತರ್‌ಮಂತರ್‌ನಲ್ಲಿ ನಡೆದ ಲಾಠಿಚಾರ್ಜ್ ಘಟನೆಯನ್ನು ಖಂಡಿಸಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಅವರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ. ಸರ್ಕಾರ ವಿದ್ಯಾರ್ಥಿಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ವಿಪಕ್ಷಗಳಿಂದ ತೀವ್ರ ಗದ್ದಲದ ಹಿನ್ನೆಲೆ ಅಂತಿಮವಾಗಿ ಉಭಯ ಸದನಗಳ ಕಲಾಪಗಳನ್ನು ಮುಂದೂಡಿದ ಪ್ರಸಂಗ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 20, 2026 12:50 PM
Follow Us