AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಬಿಜೆಪಿಯಲ್ಲಿನ ಎಲ್ಲ ಗೊಂದಲಗಳಿಗೆ ವರಿಷ್ಠರು ಆದಷ್ಟು ಬೇಗ ಇತಿಶ್ರೀ ಹೇಳಲಿದ್ದಾರೆ: ಜಗದೀಶ್ ಶೆಟ್ಟರ್

ರಾಜ್ಯ ಬಿಜೆಪಿಯಲ್ಲಿನ ಎಲ್ಲ ಗೊಂದಲಗಳಿಗೆ ವರಿಷ್ಠರು ಆದಷ್ಟು ಬೇಗ ಇತಿಶ್ರೀ ಹೇಳಲಿದ್ದಾರೆ: ಜಗದೀಶ್ ಶೆಟ್ಟರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 28, 2025 | 6:13 PM

ಭಾರತೀಯ ಜನತಾ ಪಕ್ಷ ಕೇವಲ ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲ, ರಾಜ್ಯಮಟ್ಟದಲ್ಲೂ ಅಗಾಧವಾಗಿ ಮತ್ತು ಕ್ಷಿಪ್ರವಾಗಿ ಬೆಳೆಯುತ್ತಿದೆ, ಹಾಗಾಗೇ ಸ್ಥಾನಗಳಿಗಾಗಿ ಪೈಪೋಟಿ ನಡೆಯುತ್ತಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ರಾಜ್ಯದ ಮುಖ್ಯಮಂತ್ತಿಯೂ ಆಗಿದ್ದ ಶೆಟ್ಟರ್ ಒಬ್ಬ ಚಾಣಾಕ್ಷ ರಾಜಕಾರಣಿ ಅನ್ನೋದ್ರಲ್ಲಿ ಎರಡು ಮಾತಿಲ್ಲ, ಅವರ ಮಾತುಗಳಿಂದ ಯಾವ ಬಣದವರು ಅನ್ನೋದು ಗೊತ್ತಾಗಲ್ಲ!

ಕಲಬುರಗಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಪಕ್ಷದ ರಾಜ್ಯ ಘಟಕ ಗೊಂದಲದ ಗೂಡಾಗಿರುವುದನ್ನು ಅಂಗೀಕರಿಸಿದರು. ಇದು ಎಲ್ಲ ರಾಜಕೀಯ ಪಕ್ಷಗಳಲ್ಲಿ ಇರುವಂಥದ್ದೇ, ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ, ಆದರೆ ತಮ್ಮ ನಾಯಕರು ನೀಡುವ ವೈಯಕ್ತಿಕ ಹೇಳಿಕೆಗಳಿಗೆ ತಾನು ಪ್ರತಿಕ್ರಿಯೆ ನೀಡುವ ಗೋಜಿಗೆ ಹೋಗಲ್ಲ, ದೆಹಲಿಯಲ್ಲಿರುವ ಪಕ್ಷದ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ, ಎಲ್ಲ ಗೊಂದಲಗಳಿಗೆ ಅವರು ಬೇಗ ಇತಿಶ್ರೀ ಹಾಡುವ ವಿಶ್ವಾಸ ತನಗಿದೆ ಎಂದು ಶೆಟ್ಟರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಭಂಡತನಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ: ಜಗದೀಶ್ ಶೆಟ್ಟರ್ ವಾಗ್ದಾಳಿ