Assembly Polls: ಶಿವಲಿಂಗೇಗೌಡರು ಯಾವಾಗ ಕಾಂಗ್ರೆಸ್ ಸೇರುತ್ತಾರೆ ಅನ್ನೋದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ: ಡಿಕೆ ಸುರೇಶ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 08, 2023 | 3:47 PM

ಶಿವಲಿಂಗೇಗೌಡರು ಮಾತ್ರ ಅಲ್ಲ, ಜೆಡಿಎಸ್ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಬಯಸುವವರಿಗೆಲ್ಲ ತಾನು ಮುಕ್ತ ಆಹ್ವಾನ ನೀಡುತ್ತಿರುವುದಾಗಿ ಸುರೇಶ್ ಹೇಳಿದರು.

ಹಾಸನ: ಜೆಡಿಎಸ್ ಶಾಸಕ ಕೆಎಮ್ ಶಿವಲಿಂಗೇಗೌಡರು (KM Shivalingegowda) ಪಕ್ಷವನ್ನು ತೊರೆದು ಕಾಂಗ್ರೆಸ್ (Congress) ಸೇರಲಿದ್ದಾರೆ ಅನ್ನೋದು ಬಹಳ ದಿನಗಳಿಂದ ಚರ್ಚೆಯಾಗುತ್ತಿರುವ ವಿಷಯ. ಆದರೆ ಆ ದಿನ ಇನ್ನೂ ಕೂಡಿ ಬಂದಿಲ್ಲ ಅನಿಸುತ್ತಿದೆ. ಹಾಸನದಲ್ಲಿಂದು ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ (DK Suresh) ಅವರು ಶಿವಲಿಂಗೇಗೌಡರು ಯಾವಾಗ ಪಕ್ಷಕ್ಕೆ ಸೇರಲಿದ್ದಾರೆ ಅಂತ ಗೊತ್ತಿಲ್ಲ, ಆ ಬಗ್ಗೆ ಪಕ್ಷದ ವರಿಷ್ಟರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ಶಿವಲಿಂಗೇಗೌಡರು ಮಾತ್ರ ಅಲ್ಲ, ಜೆಡಿಎಸ್ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಬಯಸುವವರಿಗೆಲ್ಲ ತಾನು ಮುಕ್ತ ಆಹ್ವಾನ ನೀಡುತ್ತಿರುವುದಾಗಿ ಸುರೇಶ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 08, 2023 03:43 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.