ನಮಗಾಗಿ ಬೆವರು ಸುರಿಸಿ ದುಡಿಯುವ ಕಾರ್ಯಕರ್ತರ ಮನಸನ್ನು ನೋಯಿಸಬಾರದು: ಸಿಟಿ ರವಿ, ವಿ ಪ ಸದಸ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Feb 11, 2025 | 2:24 PM

ಬಸನಗೌಡ ಯತ್ನಾಳ್ ಮತ್ತು ಕೆಲ ಬಿಜೆಪಿ ನಾಯಕರು ನಿನ್ನೆ ದೆಹಲಿಗೆ ತೆರಳಿ ವಿ ಸೋಮಣ್ಣರನ್ನು ಭೇಟಿಯಾಗಿದ್ದಾರೆ. ಅವರೊಂದಿಗೆ ಮಾತುಕತೆ ನಡೆಸಿದ ಬಳಿಕವೂ ಯತ್ನಾಳ್ ಮಾಧ್ಯಮಗಳಿಗೆ ಹೇಳಿಕೆ ನೀಡಿ ವರಿಷ್ಠರು ಸೋಮಣ್ಣ ಮೂಲಕ ಸಂದೇಶ ನೀಡಿದ್ದಾರೆ ಅಂದಿದ್ದಾರೆ. ಅದಾದ ಬಳಿಕ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್​ಗೆ ಶೋಕಾಸ್ ನೋಟೀಸ್ ಜಾರಿ ಮಾಡಿದೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ; ಸೋಮವಾರದಂದು ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ದೆಹಲಿಯಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಅವರ ಮನೆಯಲ್ಲಿ ಸಭೆ ನಡೆಸಿ, ವಿಜಯಂದ್ರರನ್ನು ಕೆಳಗಿಳಿಸುವ ಬಗ್ಗೆ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡುತ್ತಾ, ತಾವು ಶಾಸಕ, ಮಂತ್ರಿಯಾಗುವುದರ ಹಿಂದೆ ಲಕ್ಷಾಂತರ ಕಾರ್ಯಕರ್ತರ ಪರಿಶ್ರಮ ಅಡಗಿರುತ್ತದೆ ಮತ್ತು ಕೋಟ್ಯಾಂತರ ಜನ ತಮ್ಮ ಪಕ್ಷದ ವಿಚಾರಧಾರೆ ಮೇಲೆ ನಂಬಿಕೆಯಿಟ್ಟು ತಮ್ಮನ್ನು ಅವರ ಪ್ರತಿನಿಧಿಯಾಗಿ ಆಯ್ಕೆ ಮಾಡಿರುತ್ತಾರೆ, ತಮ್ಮ ನಡೆ-ನುಡಿ ಯಾವ ಕಾರಣಕ್ಕೂ ಅವರಿಗೆ ನೋವನ್ನುಂಟು ಮಾಡಬಾರದು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಸದಾನಂದಗೌಡರ ಮನೆಯಲ್ಲಿ ಅಶೋಕ, ಬೊಮ್ಮಾಯಿ, ಅಶ್ವಥ್ ಮತ್ತು ಸಿಟಿ ರವಿ ಮೀಟಿಂಗ್!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.