ಚಲಿಸುತ್ತಿದ್ದ ರೈಲಿಗೆ ಕಲ್ಲು ಎಸೆದ ಯುವಕ, ಓರ್ವ ಪ್ರಯಾಣಿಕನಿಗೆ ಗಾಯ

Updated on: Aug 05, 2024 | 11:46 AM

ಚಲಿಸುತ್ತಿದ್ದ ಭಾಗಲ್‌ಪುರ-ಜಯನಗರ ಎಕ್ಸ್‌ಪ್ರೆಸ್ ರೈಲಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲು ತೂರಾಟ ನಡೆಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಪರಿಣಾಮ ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಗಾಯಗೊಂಡಿದ್ದಾರೆ. ಎಕ್ಸ್​ನಲ್ಲಿ ಸುಪಾಲ್ ವಾಯ್ಸ್ ಎಂಬ ಖಾತೆಯು ಘಟನೆಯ ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಂಡಿದೆ.

ಚಲಿಸುತ್ತಿದ್ದ ರೈಲಿನ ಮೇಲೆ ಯುವಕನೊಬ್ಬ ಕಲ್ಲು ಎಸೆದ ಪರಿಣಾಮ ಪ್ರಯಾಣಿಕ ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಭಾಗಲ್ಪುರ-ಜೈನಗರ ಎಕ್ಸ್​ಪ್ರೆಸ್​ ರೈಲಿನ ಮೇಲೆ ಯುವಕ ಕಲ್ಲು ತೂರಾಟ ನಡೆಸಿದ್ದಾನೆ. ಈ ಚಿತ್ರಗಳನ್ನು ಪ್ರಯಾಣಿಕರ್ಯಾರೋ ಸೆರೆ ಹಿಡಿದಿದ್ದಾರೆ.

ಸಾಮಾಜಿಕ ಮಧ್ಯಮಗಳಲ್ಲಿ ಹಂಚಿಕೊಳ್ಳಲಾದ ಚಿತ್ರಗಳಲ್ಲೊಂದರಲ್ಲಿ ಯುವಕನೊಬ್ಬ ರೈಲಿನ ಮೇಲೆ ಕಲ್ಲು ಎಸೆಯುವುದನ್ನು ಹತ್ತಿರದಿಂದ ಕಾಣಬಹುದು. ಇನ್ನೊಂದು ಚಿತ್ರದಲ್ಲಿ ಗಾಯಗೊಂಡಿರುವ ಪ್ರಯಾಣಿಕನನ್ನು ಕಾಣಬಹುದು. ದರ್ಬಂಗಾ ಮತ್ತು ಕಾಕರಘಾಟಿ ನಡುವೆ ಕಲ್ಲು ತೂರಾಟ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಂಥವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಿದ್ದಾರೆ. ಈ ಪೋಸ್ಟ್​ಗೆ ರೈಲ್ವೆ ಸಚಿವಾಲಯವೂ ಪ್ರತಿಕ್ರಿಯಿಸಿದೆ. ಘಟನೆಗೆ ಕಾರಣನಾದ ವ್ಯಕ್ತಿಯನ್ನು ಗುರುತಿಸಲಾಗಿದ್ದು, ಆತನ ವಿರುದ್ಧ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.

ಸಚಿವಾಲಯವು ಸಾರ್ವಜನಿಕವಾಗಿ ಮನವಿ ಮಾಡಿದ್ದು, ಯಾವುದೇ ಕಲ್ಲು ತೂರಾಟ ಅಥವಾ ಸಮಾಜವಿರೋಧಿ ನಡವಳಿಕೆಗಳು ಕಂಡು ಬಂದರೆ ಅಧಿಕಾರಿಗಳಿಗೆ ತಕ್ಷಣವೇ ವರದಿ ಮಾಡುವಂತೆ ನಾಗರಿಕರನ್ನು ಒತ್ತಾಯಿಸಿತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More