ಪ್ರವಾಸದ ಆಸೆಯಲ್ಲಿ ಕೆಂಪೇಗೌಡ ಏರ್​​ಪೋರ್ಟ್​​ಗೆ ಬಂದವರು ಅತಂತ್ರ, ಪ್ಲ್ಯಾನ್​​ಗಳೆಲ್ಲ ಉಲ್ಟಾ

Updated on: Dec 04, 2025 | 3:19 PM

ಕೆಂಪೇಗೌಡ ಏರ್ಪೋಟ್ ನಲ್ಲಿ ಇಂದು (ಡಿಸೆಂಬರ್ 04) ಸಹ ವಿಮಾನಗಳ‌ ಹಾರಾಟದಲ್ಲಿ ವ್ಯತ್ಯಯ ಮುಂದುವರೆದಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಇಂಡಿಗೋ ವಿಮಾನಗಳ ವ್ಯತ್ಯಯದಿಂದ 6 ದಿನದ ಟ್ರಿಪ್ 5 ದಿನಕ್ಕೆ ಮೊಟಕುಗೊಂಡಿದೆ. ಇದರಿಂದ ವಿದೇಶ ಪ್ರವಾಸಕ್ಕೆಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ ಪ್ರಯಾಣಿಕರು ಅತಂತ್ರವಾಗಿದ್ದು, ಏನು ಮಾಡಬೇಕೆಂದು ದಿಕ್ಕುತೋಚದೇ ಪರದಾಡುತ್ತಿದ್ದಾರೆ.

ಬೆಂಗಳೂರು, (ಡಿಸೆಂಬರ್ 04): ಕೆಂಪೇಗೌಡ ಏರ್ಪೋಟ್ ನಲ್ಲಿ ಇಂದು (ಡಿಸೆಂಬರ್ 04) ಸಹ ವಿಮಾನಗಳ‌ ಹಾರಾಟದಲ್ಲಿ ವ್ಯತ್ಯಯ ಮುಂದುವರೆದಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಇಂಡಿಗೋ ವಿಮಾನಗಳ ವ್ಯತ್ಯಯದಿಂದ 6 ದಿನದ ಟ್ರಿಪ್ 5 ದಿನಕ್ಕೆ ಮೊಟಕುಗೊಂಡಿದೆ. ಇದರಿಂದ ವಿದೇಶ ಪ್ರವಾಸಕ್ಕೆಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ ಪ್ರಯಾಣಿಕರು ಅತಂತ್ರವಾಗಿದ್ದು, ಏನು ಮಾಡಬೇಕೆಂದು ದಿಕ್ಕುತೋಚದೇ ಪರದಾಡುತ್ತಿದ್ದಾರೆ. ದೆಹಲಿಯಲ್ಲಿ ಇಂಡಿಗೋ ವಿಮಾನ 12 ಗಂಟೆ ವಿಳಂಬವಾಗಿದೆ. ಇದರಿಂದ ಬೆಂಗಳೂರಿನಿಂದ ಶ್ರೀಲಂಕಾಗೆ ತೆರಳುವ ಫ್ಲೈಟ್​ ಮಿಸ್ ಆಗಿದ್ದು. 100ಕ್ಕೂ ಹೆಚ್ಚು ಜನರು ಕಂಗಾಲಾಗಿದ್ದಾರೆ. ಇನ್ನು 6 ದಿನ ಪ್ರವಾಸದ ಪ್ಲ್ಯಾನ್​ ಮಾಡಿಕೊಂಡು ಜೈಪುರದಿಂದ ಬಂದಿದ್ದ ತಂಡ ಸಹ ಪ್ಲೈಟ್ ಮಿಸ್ ಆದ ಕಾರಣ ಬಸ್ ಮೂಲಕ ವಿವಿಧೆಡೆ ಪ್ರಯಾಣ ಬೆಳೆಸಿದೆ. ಇನ್ನು ಕೆಲ ಪ್ರಯಾಣಿಕರು ಏರ್​​ಪೋರ್ಟ್​​ನಲ್ಲಿ ಲಗೇಜ್ ಹಿಡಿದುಕೊಂಡು ಪರದಾಡುತ್ತಿದ್ದಾರೆ.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More