ಇಂದಿನ ಚಿತ್ತಾಪುರದ RSS ಪಥ ಸಂಚಲನಕ್ಕೆ ಬ್ರೇಕ್; ಅಕ್ಟೋಬರ್​​ 24ಕ್ಕೆ ವಿಚಾರಣೆ ಮುಂದೂಡಿದ ಕಲಬುರಗಿ ಹೈಕೋರ್ಟ್ ಪೀಠ

Updated on: Oct 19, 2025 | 1:13 PM

ಚಿತ್ತಾಪುರದಲ್ಲಿ ಆರ್​​​ಎಸ್​​​ಎಸ್​ ಪಥಸಂಚಲನಕ್ಕೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ, ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ. ಕೋರ್ಟಿನ ಆದೇಶದಂತೆ ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಯಲಿದೆ. ಹೀಗಾಗಿ ಇಂದು ನಡೆಯಬೇಕಿದ್ದ RSS ಪಥಸಂಚಲನಕ್ಕೆ ಬ್ರೇಕ್ ಬಿದ್ದಿದೆ.

ಕಲಬುರಗಿ, ಅಕ್ಟೋಬರ್ 19: ಚಿತ್ತಾಪುರದಲ್ಲಿ ಆರ್​​​ಎಸ್​​​ಎಸ್​ ಪಥಸಂಚಲನಕ್ಕೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ, ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ. ಒಂದು ವೇಳೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅನುಮತಿ ಕೊಟ್ಟಲ್ಲಿ ನವೆಂಬರ್ 2 ರಂದು ಪಥ ಸಂಚಲನ ನಡೆಯುತ್ತದೆ. ಇಲ್ಲವಾದಲ್ಲಿ ಕೋರ್ಟಿನ ಆದೇಶದಂತೆ ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಯಲಿದೆ. ಹೀಗಾಗಿ ಇಂದು ನಡೆಯಬೇಕಿದ್ದ RSS ಪಥಸಂಚಲನಕ್ಕೆ ಬ್ರೇಕ್ ಬಿದ್ದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.