ದರ್ಶನ್​​ ಹಾಗೂ ಪವಿತ್ರಾ ಪತಿ-ಪತ್ನಿಯಾ? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ ಏನು?

Updated on: Sep 07, 2024 | 9:56 AM

ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಪವಿತ್ರಾ ಗೌಡ ಅವರ ನಂಬರ್ ಅನ್ನು ದರ್ಶನ್​ ಅವರು ಪವೀ ಅಂತ ಸೇವ್​ ಮಾಡಿಕೊಂಡಿದ್ದಾರೆ. ತನಿಖೆ ವೇಳೆ ಪೊಲೀಸರು ಮೊಬೈಲ್​ನಲ್ಲಿನ ಮಾಹಿತಿ ರಿಟ್ರೀವ್ ಮಾಡಿದಾಗ ಇಂಥ ಸಂಗತಿಗಳು ಬಯಲಾಗಿವೆ.

ದರ್ಶನ್ ಹಾಗೂ ಪವಿತ್ರಾ ಗೌಡ ಒಟ್ಟಾಗಿ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ್ದರು. ಈ ಕಾರಣದಿಂದಲೇ ಇಬ್ಬರೂ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಅವರನ್ನು ಪೊಲೀಸರು ದರ್ಶನ್ ಪತ್ನಿ ಎಂದು ಕರೆದಿದ್ದರು. ಇದಕ್ಕೆ ವಿಜಯಲಕ್ಷ್ಮೀ ಆಕ್ರೋಶ ಹೊರಹಾಕಿದ್ದರು. ನಾನು ಅವರ ಪತ್ನಿ ಎಂದಿದ್ದರು. ಹಾಗಾದರೆ ದರ್ಶನ್ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಇದಕ್ಕೆ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಇದೆ. ಇಬ್ಬರೂ ಲಿವ್​ ಇನ್ ರಿಲೇಶನ್​ಶಿಪ್​ನಲ್ಲಿದ್ದರು ಎಂದು ಬರೆಯಲಾಗಿದೆ. ರೇಣುಕಾ ಸ್ವಾಮಿ ಎದುರು ಬಯ್ಯುವಾಗ ದರ್ಶನ್ ಅವರು ಪವಿತ್ರಾರನ್ನು ಪತ್ನಿ ಎಂದು ಕರೆದಿದ್ದಾಗಿ ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 07, 2024 08:14 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More