ಮಾಧ್ಯಮಗಳ ಕ್ಯಾಮೆರಾ ಕಂಡು ಗರಂ ಆದ ಪವಿತ್ರಾ ಗೌಡ ಸಹೋದರ; ಇಲ್ಲಿದೆ ವಿಡಿಯೋ

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಕೊಲೆ ಕೇಸ್​ನಲ್ಲಿ ನಟಿ ಪವಿತ್ರಾ ಗೌಡ ಎ1 ಆಗಿದ್ದು, ಒಟ್ಟು 10 ಆರೋಪಿಗಳು ಈಗ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ದರ್ಶನ್​ ಜೊತೆ ಇನ್ನುಳಿದ ಆರೋಪಿಗಳ ಪೊಲೀಸ್​ ಕಸ್ಟಡಿ ಮುಂದುವರಿದಿದೆ. ಪರಪ್ಪನ ಅಗ್ರಹಾರದಲ್ಲಿ ಇರುವ ಪವಿತ್ರಾ ಗೌಡ ಅವರನ್ನು ನೋಡಲು ಕುಟುಂಬದವರು ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಮಾಧ್ಯಮಗಳ ಕ್ಯಾಮೆರಾ ಕಂಡು ಗರಂ ಆದ ಪವಿತ್ರಾ ಗೌಡ ಸಹೋದರ; ಇಲ್ಲಿದೆ ವಿಡಿಯೋ
|

Updated on: Jun 21, 2024 | 8:12 PM

ಕೊಲೆ ಕೇಸ್​ನಲ್ಲಿ ಸಿಲುಕಿರುವ ನಟಿ ಪವಿತ್ರಾ ಗೌಡ (Pavithra Gowda) ಈಗ ಜೈಲು ಪಾಲಾಗಿದ್ದಾರೆ. ತಮಗೆ ಅಶ್ಲೀಲ ಮೆಸೇಜ್​ ಕಳಿಸಿದ ಎಂಬ ಕಾರಣಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ ಆರೋಪದಲ್ಲಿ ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ. ಜೂನ್​ 20ರಂದು ಪವಿತ್ರಾ ಗೌಡ ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಯಿತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು. ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಪವಿತ್ರಾ ಗೌಡ ದಿನ ಕಳೆಯುವಂತಾಗಿದೆ. ಜೈಲಿನಲ್ಲಿ ಇರುವ ಅವರನ್ನು ನೋಡಲು ತಾಯಿ, ಚಿಕ್ಕಮ್ಮ, ಸಹೋದರ ಮುಂತಾದವರು ಬಂದಿದ್ದಾರೆ. ಈ ವೇಳೆ ಮಾಧ್ಯಮಗಳ ಕ್ಯಾಮೆರಾ ಕಂಡು ಪವಿತ್ರಾ ಗೌಡ ಸಹೋದರ (Pavithra Gowda Brother) ಗರಂ ಆಗಿದ್ದಾರೆ. ದರ್ಶನ್​ (Darshan) ಅವರ ಗೆಳತಿ ಪವಿತ್ರಾ ಗೌಡಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ತನಿಖೆ ಮುಂದುವರಿದಂತೆಲ್ಲ ಅನೇಕ ಶಾಕಿಂಗ್​ ಅಂಶಗಳು ಹೊರಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ