ಮಾಧ್ಯಮಗಳ ಕ್ಯಾಮೆರಾ ಕಂಡು ಗರಂ ಆದ ಪವಿತ್ರಾ ಗೌಡ ಸಹೋದರ; ಇಲ್ಲಿದೆ ವಿಡಿಯೋ

|

Updated on: Jun 21, 2024 | 8:12 PM

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಕೊಲೆ ಕೇಸ್​ನಲ್ಲಿ ನಟಿ ಪವಿತ್ರಾ ಗೌಡ ಎ1 ಆಗಿದ್ದು, ಒಟ್ಟು 10 ಆರೋಪಿಗಳು ಈಗ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ದರ್ಶನ್​ ಜೊತೆ ಇನ್ನುಳಿದ ಆರೋಪಿಗಳ ಪೊಲೀಸ್​ ಕಸ್ಟಡಿ ಮುಂದುವರಿದಿದೆ. ಪರಪ್ಪನ ಅಗ್ರಹಾರದಲ್ಲಿ ಇರುವ ಪವಿತ್ರಾ ಗೌಡ ಅವರನ್ನು ನೋಡಲು ಕುಟುಂಬದವರು ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಕೊಲೆ ಕೇಸ್​ನಲ್ಲಿ ಸಿಲುಕಿರುವ ನಟಿ ಪವಿತ್ರಾ ಗೌಡ (Pavithra Gowda) ಈಗ ಜೈಲು ಪಾಲಾಗಿದ್ದಾರೆ. ತಮಗೆ ಅಶ್ಲೀಲ ಮೆಸೇಜ್​ ಕಳಿಸಿದ ಎಂಬ ಕಾರಣಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆತಂದು ಕೊಲೆ ಮಾಡಿದ ಆರೋಪದಲ್ಲಿ ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ. ಜೂನ್​ 20ರಂದು ಪವಿತ್ರಾ ಗೌಡ ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಯಿತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು. ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಪವಿತ್ರಾ ಗೌಡ ದಿನ ಕಳೆಯುವಂತಾಗಿದೆ. ಜೈಲಿನಲ್ಲಿ ಇರುವ ಅವರನ್ನು ನೋಡಲು ತಾಯಿ, ಚಿಕ್ಕಮ್ಮ, ಸಹೋದರ ಮುಂತಾದವರು ಬಂದಿದ್ದಾರೆ. ಈ ವೇಳೆ ಮಾಧ್ಯಮಗಳ ಕ್ಯಾಮೆರಾ ಕಂಡು ಪವಿತ್ರಾ ಗೌಡ ಸಹೋದರ (Pavithra Gowda Brother) ಗರಂ ಆಗಿದ್ದಾರೆ. ದರ್ಶನ್​ (Darshan) ಅವರ ಗೆಳತಿ ಪವಿತ್ರಾ ಗೌಡಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ತನಿಖೆ ಮುಂದುವರಿದಂತೆಲ್ಲ ಅನೇಕ ಶಾಕಿಂಗ್​ ಅಂಶಗಳು ಹೊರಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on