‘ಪವಿತ್ರಾ ಕೊಲೆ ಮಾಡುವಂಥ ವ್ಯಕ್ತಿ ಅಲ್ಲ’: ಮಾಜಿ ಪತ್ನಿ ಬಗ್ಗೆ ಸಂಜಯ್​ ಸಿಂಗ್​ ಹೇಳಿಕೆ

ಸಂಜಯ್​ ಸಿಂಗ್​ ಮತ್ತು ಪವಿತ್ರಾ ಗೌಡ ವಿಚ್ಛೇದನ ಪಡೆದು ಅನೇಕ ವರ್ಷಗಳು ಕಳೆದಿವೆ. ಬಳಿಕ ಪವಿತ್ರಾ ಗೌಡ ಹಾಗೂ ದರ್ಶನ್​ ನಡುವೆ ಆಪ್ತತೆ ಬೆಳೆಯಿತು. ಈಗ ಇಬ್ಬರೂ ಕೊಲೆ ಕೇಸ್​ನಲ್ಲಿ ಬಂಧಿತರಾಗಿದ್ದಾರೆ. ಮಾಜಿ ಪತ್ನಿಯ ಈ ಪ್ರಕರಣದ ಕುರಿತು ಸಂಜಯ್​ ಸಿಂಗ್​ ಈಗ ಮಾತನಾಡಿದ್ದಾರೆ. ಈ ಸಂದರ್ಭದಲ್ಲೂ ಅವರು ಮಾಜಿ ಪತ್ನಿಯ ಪರವಾಗಿ ಹೇಳಿಕೆ ನೀಡಿದ್ದಾರೆ.

‘ಪವಿತ್ರಾ ಕೊಲೆ ಮಾಡುವಂಥ ವ್ಯಕ್ತಿ ಅಲ್ಲ’: ಮಾಜಿ ಪತ್ನಿ ಬಗ್ಗೆ ಸಂಜಯ್​ ಸಿಂಗ್​ ಹೇಳಿಕೆ
| Updated By: ಮದನ್​ ಕುಮಾರ್​

Updated on: Jun 13, 2024 | 5:21 PM

ನಟಿ ಪವಿತ್ರಾ ಗೌಡ ಹಾಗೂ ನಟ ದರ್ಶನ್​ (Darshan) ಈಗ ಪೊಲೀಸರ ಅತಿಥಿ ಆಗಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆಯಲ್ಲಿ ಮುಖ್ಯ ಆರೋಪಿಗಳಾಗಿ ಅವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ (Pavithra Gowda) ಅವರ ಮಾಜಿ ಪತಿ ಸಂಜಯ್​ ಸಿಂಗ್​ (Sanjay Singh) ಪ್ರತಿಕ್ರಿಯೆ ನೀಡಿದ್ದಾರೆ. ‘ಟಿವಿ9 ಕನ್ನಡ’ ಜೊತೆ ಮಾತನಾಡಿದ ಅವರು ಮಾಜಿ ಪತ್ನಿಯ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ವಿಚ್ಛೇದನ ಪಡೆಯುವಾಗ ಪವಿತ್ರಾ ಗೌಡ ಅವರನ್ನು ನಾನು ಕೊನೆಯ ಬಾರಿ ನೋಡಿದ್ದು ಕೋರ್ಟ್​ನಲ್ಲಿ. ಕೊಲೆ ಪ್ರಕರಣದಲ್ಲಿ ಆಕೆಯ ಹೆಸರು ಬಂದಿದೆ. ಆದರೆ ಆಕೆ ಅಂಥ ವ್ಯಕ್ತಿ ಅಲ್ಲ. ಅವರು ತೆಗೆದುಕೊಂಡ ಕ್ರಮಕ್ಕೆ ನಾನು ಬೆಂಬಲ ನೀಡುತ್ತಿಲ್ಲ. ಅವರು ಆ ರೀತಿಯ ಮಹಿಳೆ ಅಲ್ಲ ಅಂತ ನಾನು ಹೇಳುತ್ತೇನೆ. ನಾನು ತುಂಬ ಪ್ರಾಕ್ಟಿಕಲ್​ ಮನುಷ್ಯ. ಈ ಪ್ರಕರಣದಲ್ಲಿ ಮುಖ್ಯ ವಿಚಾರವನ್ನು ಜನರು ಬಿಟ್ಟಿದ್ದಾರೆ. ಯಾರು ಸಾಯಿಸಿದ್ದಾರೋ ಆ ಬಗ್ಗೆ ಕಾನೂನು ವಿಚಾರ ಮಾಡುತ್ತದೆ’ ಎಂದು ಸಂಜಯ್​ ಸಿಂಗ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ