‘ಪವಿತ್ರಾ ಅಂತ್ಯಕ್ರಿಯೆ ಬಳಿಕ ಅಲ್ಲಿಂದ ಬರೋಕೆ ರೆಡಿ ಇರಲಿಲ್ಲ’; ನಟ ಚಂದು ಆತ್ಮಹತ್ಯೆಗೆ ಅಸಲಿ ಕಾರಣ ಏನು?
ಕಿರುತೆರೆ ನಟಿ ಪವಿತ್ರಾ ಅವರನ್ನು ಮಂಡ್ಯದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಅಲ್ಲಿಗೆ ಚಂದು ಕೂಡ ಆಗಮಿಸಿದ್ದರು. ಆಗ ಅವರು ಸಾಕಷ್ಟು ಕಣ್ಣೀರು ಹಾಕಿದ್ದರು. ಪವಿತ್ರಾನ ಕಳೆದುಕೊಂಡು ಬೇಸರ ಹೊರಹಾಕಿದ್ದರು.
ನಟಿ ಪವಿತ್ರಾ ಜಯರಾಂ (Pavitra Jayaram) ಅವರು ನಿಧನ ಹೊಂದಿದ ಬೆನ್ನಲ್ಲೇ ಅವರ ಗೆಳೆಯ ಚಂದು ಅವರು ಆತ್ಮಹತ್ಯೆ ಮಾಡಿಕೊಂಡು ನಿಧನ ಹೊಂದಿದ್ದಾರೆ. ಪವಿತ್ರಾ ಅವರನ್ನು ಮಂಡ್ಯದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಅಲ್ಲಿಗೆ ಚಂದು ಕೂಡ ಆಗಮಿಸಿದ್ದರು. ಆಗ ಅವರು ಸಾಕಷ್ಟು ಕಣ್ಣೀರು ಹಾಕಿದ್ದರು. ಪವಿತ್ರಾನ ಕಳೆದುಕೊಂಡು ಬೇಸರ ಹೊರಹಾಕಿದ್ದರು. ಈಗ ಅವರು ಕೂಡ ಆತ್ಮಹತ್ಯೆ ಮಾಡಿಕೊಂಡಿರೋದು ಅನೇಕರಿಗೆ ಶಾಕಿಂಗ್ ಎನಿಸಿದೆ. ಈ ಬಗ್ಗೆ ಪವಿತ್ರ ಜಯರಾಂ ಸಂಬಂಧಿ ಲೋಕೇಶ್ ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ‘ಅಂತ್ಯಕ್ರಿಯೆ ನಡೆಯುವಾಗ ಚಂದು ಮಾತನಾಡಿದ್ದರು. ಪವಿತ್ರಾನ ಬಿಟ್ಟಿರೋಕೆ ಆಗಲ್ಲ ಎಂದು ಹೇಳುತ್ತಲೇ ಇದ್ದರು. ಅವರ ಆಲೋಚನೆಯಲ್ಲೇ ಇದ್ದರು. ನನ್ನ ಪರಿಸ್ಥಿತಿ ಈ ರೀತಿ ಆಗೋಯ್ತಲ್ಲ ಎನ್ನುತ್ತಿದ್ದರು. ಮೊಬೈಲ್ ಸಂಖ್ಯೆ ಕೂಡ ಕೊಟ್ಟಿದ್ದರು. ಆದರೆ, ಕರೆ ಮಾಡೋಕೆ ಆಗಿರಲಿಲ್ಲ’ ಎಂದಿದ್ದಾರೆ ಲೋಕೇಶ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

