ಪ್ರಮಾಣ ವಚನ ಸ್ವೀಕರಿಸಿ ಅಣ್ಣನ ಕಾಲಿಗೆರಗಿದ ಪವನ್ ಕಲ್ಯಾಣ್

|

Updated on: Jun 12, 2024 | 2:48 PM

ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವೇದಿಕೆ ಮೇಲಿದ್ದ ಅಣ್ಣ ಮೆಗಾಸ್ಟಾರ್ ಚಿರಂಜೀವಿಯ ಆಶೀರ್ವಾದ ಪಡೆದಿದ್ದಾರೆ.

ನಟ ಪವನ್ ಕಲ್ಯಾಣ್ (Pawan Kalyan), ರಾಜಕಾರಣಿಯಾಗಿಯೂ ಯಶಸ್ಸು ಗಳಿಸಿದ್ದಾರೆ. ಆಂಧ್ರ ಪ್ರದೇಶ (Andhra Pradesh) ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ ಪವನ್ ಕಲ್ಯಾಣ್, ತಮ್ಮ ಜನಸೇನಾ ಪಕ್ಷದ ಇತರೆ 20 ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡಿದ್ದಾರೆ ಮಾತ್ರವಲ್ಲದೆ ಟಿಡಿಪಿಯ ಅಭೂತಪೂರ್ವ ವಿಜಯಕ್ಕೂ ಪಾಲು ನೀಡಿದ್ದಾರೆ. ಇಂದು (ಜೂನ್ 12) ವಿಜಯವಾಡದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಆಂಧ್ರ ಪ್ರದೇಶದ ಮುಖ್ಯ ಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅದೇ ಸಭೆಯಲ್ಲಿ ನಟ ಪವನ್ ಕಲ್ಯಾಣ್ ಸಹ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ, ಅಮಿತ್ ಶಾ, ಚಂದ್ರಬಾಬು ನಾಯ್ಡು, ರಜನೀಕಾಂತ್, ಬಾಲಕೃಷ್ಣ ಎಲ್ಲರಿಗೂ ನಮಸ್ಕಾರ ಮಾಡಿದ ಪವನ್ ಕಲ್ಯಾಣ್, ಕೊನೆಯಲ್ಲಿ ಅಣ್ಣ ಚಿರಂಜೀವಿ ಕಾಲಿಗೆ ಎರಗಿ ಆಶೀರ್ವಾದ ಪಡೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 2:22 pm, Wed, 12 June 24

Follow us on