ಅನಕ್ಷರಸ್ಥ ಗ್ರಾ ಪಂ ಅಧ್ಯಕ್ಷರ ಶೋಷಣೆ, ಪಿಡಿಓಗಳ ಮೇಲೆ ಹರಿಹಾಯ್ದ ಬಿಜೆಪಿ ಶಾಸಕ ಸುರೇಶ್ ಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Aug 01, 2025 | 6:53 PM

ಕಾಂಗ್ರೆಸ್ ಸರ್ಕಾರ ಬಂದ ನಂತರ ಒಬ್ಬ ಪಿಡಿಓ ₹50ಲಕ್ಷ ತೆರಿಗೆ ಹಣವನ್ನು ಲಪಟಾಯಿಸಿ, ತಿಂದು ನೀರು ಕುಡಿದಿದ್ದ. ಅವನನ್ನು ಸಸ್ಪೆಂಡ್ ಮಾಡಿದ್ದು ನಿಜವಾದರೂ, 6 ತಿಂಗಳಲ್ಲಿ ಅವನು ಕೆಲಸಕ್ಕೆ ವಾಪಸ್ಸು ಬಂದಿದ್ದ, ಯಾರ್ಯಾರಿಗೆ ದುಡ್ಡು ಕೊಟ್ಟನೋ ಗೊತ್ತಿಲ್ಲ. ಸರ್ಕಾರದ ಹಣ ದುರುಪಯೋಗ ಮಾಡಿದವನನ್ನು ಅಸಲಿಗೆ ಜೈಲಿಗೆ ಹಾಕಬೇಕು, ಆದರೆ ಇವನು ಮಾತ್ರ ರಾಜಾರೋಷವಾಗಿ ಓಡಾಡಿಕೊಂಡಿದ್ದಾನೆ ಎಂದು ಸುರೇಶ್ ಗೌಡ ಹೇಳಿದರು.

ತುಮಕೂರು, ಆಗಸ್ಟ್ 1: ತುಮಕೂರು ಗ್ರಾಮೀಣ ಬಿಜೆಪಿ ಶಾಸಕ ಬಿ ಸುರೇಶ್ ಗೌಡಪಂಚಾಯತ್ ಡೆವಲಪ್​ಮೆಂಟ್ (Panchayat Development Officer) ಅಧಿಕಾರಿಗಳ ಜನ್ಮ ಜಾಲಾಡಿದರು. ಗಾಂಧೀಜಿಯವರು ಕಂಡ ರಾಮರಾಜ್ಯದ ಕನಸು ನುಚ್ಚುನೂರಾಗಿದೆ, ರಾಜ್ಯದ ಅರ್ಧಕ್ಕಿಂತ ಹೆಚ್ಚು ಗ್ರಾಮ ಪಂಚಾಯತಿಗಳಲ್ಲಿ ಪಿಡಿಓಗಳದ್ದೇ ಕಾರುಬಾರು, ಹೆಚ್ಚು ಓದಿರದ ಅಥವಾ ಅನಕ್ಷರಸ್ಥ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಶೋಷಿಸಿ ಹಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ, ಕಳೆದ 8 ತಿಂಗಳಿಂದ ಒಂದು ಸಭೆಯನ್ನು ಸಹ ನಡೆಸಿಲ್ಲ, ನೀರು ಸರಬರಾಕು, ಕಸ ವಿಲೇವಾರಿ ವ್ಯವಸ್ಥೆಗಳು ಹದಗೆಟ್ಟು ಹೋಗಿವೆ, ಸ್ವಚ್ಛತೆ, ಗ್ರಾಮ ನೈರ್ಮಲ್ಯ ಪದಗಳಿಗೆ ಅರ್ಥವೇ ಇಲ್ಲ ಎಂದು ಸುರೇಶ್ ಗೌಡ ಒಂದೇ ಉಸುರಲ್ಲಿ ಹೇಳಿದರು.

ಇದನ್ನೂ ಓದಿ:   ರಾಜಣ್ಣ ಪ್ರಸ್ತಾಪಿಸಿದ ಹನಿ ಟ್ರ್ಯಾಪ್ ಪ್ರಕರಣ ಕರ್ನಾಟಕ ಇತಿಹಾಸದ ಅತಿದೊಡ್ಡ ಲೈಂಗಿಕ ಹಗರಣ: ಸುರೇಶ್ ಗೌಡ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.