ಯೂರಿಯಾ ಸಿಗುತ್ತಿಲ್ಲವೆಂದು ಮಣ್ಣು ತಿಂದ ರೈತನ ಮನೆಗೆ ಎರಡು ಚೀಲ ರಸಗೊಬ್ಬರ ತಂದುಕೊಟ್ಟ ಬಿಜೆಪಿ ರೈತ ಮೋರ್ಚಾ

ಅರುಣ್​ ಕುಮಾರ್​ ಬೆಳ್ಳಿ

Updated on: Jul 28, 2025 | 6:34 PM

ರಾಜ್ಯದೆಲ್ಲೆಡೆ ಈ ಬಾರಿ ಉತ್ತಮ ಮಳೆಯಾಗಿ ರೈತ ಸಮುದಾಯ ಸಂತಸದಿಂದ ಬೀಗುತ್ತಿರುವಾಗಲೇ ಯೂರಿಯಾದ ಕೊರತೆಯಿಂದ ಸಮಸ್ಯೆ ತಲೆದೋರಿದೆ. ಜಿಲ್ಲಾ, ತಾಲೂಕು ಕೇಂದ್ರ ಮತ್ತು ಹೋಬಳಿಗಳಲ್ಲಿರುವ ಎಪಿಎಂಸಿ ಮತ್ತು ಫರ್ಟಿಲೈಜರ್ ಅಂಗಡಿಗಳ ಮುಂದೆ ರೈತರ ಉದ್ದುದ್ದ ಸಾಲುಗಳು ಕಾಣುತ್ತವೆಯೇ ಹೊರತು ರಸಗೊಬ್ಬರದ ಸ್ಟಾಕ್ ಮಾತ್ರ ಕಾಣಿಸುವುದಿಲ್ಲ.

ಕೊಪ್ಪಳ, ಜುಲೈ 28: ರಸಗೊಬ್ಬರ ಯೂರಿಯಾ ಸಿಗದ ಕಾರಣ ಬೇಸತ್ತು ಹತಾಷೆಯಿಂದ ಎಪಿಎಂಸಿ ಎದುರು ಮಣ್ಣುತಿಂದ ಕುಣಿಕೇರಿ ಗ್ರಾಮದ ರೈತ ಚಂದ್ರಪ್ಪ ಬಡಿಗಿ ಅವರ ಮನೆಗೆ ಇಂದು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಮತ್ತು ಮಾಜಿ ಶಾಸಕ ಎಎಸ್ ಪಾಟೀಲ್ ನೇತೃತ್ವದ ನಿಯೋಗವೊಂದು ಭೇಟಿ ಮಾತುಕತೆ ನಡೆಸಿತಲ್ಲದೆ ಅವರಿಗೆ ಎರಡು ಚೀಲ ಯೂರಿಯಾವನ್ನು ನೀಡಿತು. ನಡಹಳ್ಳಿ ಮತ್ತು ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಬಿಜೆಪಿ ಮುಖಂಡರು ಕುಣಿಕೇರಿ ಗ್ರಾಮದಲ್ಲಿ ಚಂದ್ರಪ್ಪನವರೊಂದಿಗೆ ಮಾತಾಡುವದನ್ನು ವಿಡಿಯೋದಲ್ಲಿ ನೋಡಬಹುದು. ಇದು ಟಿವಿ9 ವರದಿಯ ಇಂಪ್ಯಾಕ್ಟ್. ಬೆಳೆಗೆ ಗೊಬ್ರ ಕೊಟ್ಟಿಲ್ಲಂದ್ರ ಅದು ನಾಶ ಆಗ್ತದ, ನಾವು ಮಣ್ಣ್ ತಿಂದ್ ಸಾಯ್ಬೇಕೇನು? ಅಂತ ಹೇಳಿದ್ದ ಚಂದ್ರ ಹಿಡಿಮಣ್ಣು ಬಾಯಿಗೆ ಹಾಕಿಕೊಂಡಿದ್ದರು.

ಇದನ್ನೂ ಓದಿ: ಕರ್ನಾಟಕದಾದ್ಯಂತ ರಸಗೊಬ್ಬರದ ಬರ: ರೈತರು ಕಂಗಾಲು, ಎಲ್ಲಿಗೆ ಹೋಗಿ ಕೇಳಿದರೂ ‘ನೋ ಸ್ಟಾಕ್’ ಬೋರ್ಡ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.