AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದ ಶ್ರಮಿಕರ ಮತ್ತು ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ

ಧಾರವಾಡದ ಶ್ರಮಿಕರ ಮತ್ತು ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ವಿವೇಕ ಬಿರಾದಾರ|

Updated on: Feb 08, 2025 | 12:33 PM

Share

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಧಾರವಾಡದ ಕಾರ್ಮಿಕರ ಮತ್ತು ಶ್ರಮಿಕರ ಬಡಾವಣೆಗಳಿಗೆ ಭೇಟಿ ನೀಡಿ, ಸ್ಥಳೀಯರೊಂದಿಗೆ ಸಂವಾದ ನಡೆಸಿದರು. ದಲಿತ ಸಮುದಾಯದವರೊಂದಿಗೆ ಮಾತುಕತೆ ನಡೆಸಿ, ಹಿಂದೂ ಸಮಾಜದ ಏಕತೆ ಮತ್ತು ಸೌಹಾರ್ದತೆಯ ಸಂದೇಶವನ್ನು ರವಾನಿಸಿದರು. ದೌರ್ಜನ್ಯದ ಬಗ್ಗೆ ವರದಿಯಾದ ವಿಷಯದ ಕುರಿತು ಅಧಿಕೃತ ಮಾಹಿತಿ ಬಂದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಧಾರವಾಡ ನಗರದ ಶ್ರಮಿಕರ ಮತ್ತು ಕಾರ್ಮಿಕರ ಬಡಾವಣೆಗಳಿಗೆ ಭೇಟಿ ನೀಡಿದರು. ನಗರದ ಲಕ್ಷ್ಮೀಸಿಂಗನಕೆರೆ, ಮಾಳಮಡ್ಡಿ ಬಡಾವಣೆಗಳಲ್ಲಿ ಶ್ರೀಗಳು ಪಾದಯಾತ್ರೆ ನಡೆಸಿದರು. ಸ್ಥಳೀಯರು ದಾರಿಯುದ್ದಕ್ಕೂ ಹೂ ಹಾಕಿ ಅದ್ದೂರಿಯಾಗಿ ಸ್ವಾಗತಕೋರಿದರು. ಬಡಾವಣೆಯ ಯಲ್ಲಮ್ಮದೇವಿ, ಸಿದ್ದರಾಮೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದರು. ಈ ವೇಳೆ ದಲಿತ ಸಮುದಾಯದವರೊಂದಿಗೆ ಶ್ರೀಗಳು ಮಾತುಕತೆ ನಡೆಸಿದರು. ಹಿಂದೂ ಸಮಾಜ ಒಗ್ಗೂಡಿಸುವ ಕುರಿತಂತೆ ಶ್ರೀಗಳ ಸಂದೇಶ ನೀಡಿದರು.

“ದಲಿತ ಯುವತಿಯರ ಮೇಲೆ ಮುಸ್ಲಿಂರಿಂದ ದೌರ್ಜನ್ಯ ಅಗುತ್ತಿವೆ, ಆಗ ಹಿಂದೂ ಸ್ವಾಮೀಜಿಗಳೆಲ್ಲ ನಮ್ಮ ಬೆಂಬಲಕ್ಕೆ ನಿಲ್ಲಬೇಕು” ಎಂದು ಕಾಂಗ್ರೆಸ್ ನಾಮನಿರ್ದೇಶಿತ ಪಾಲಿಕೆ ಸದಸ್ಯ ತುಳಸಪ್ಪ ಪೂಜಾರ ನೋವು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಪೇಜಾವರ ಶ್ರೀಗಳು “ಅದು ನಮ್ಮ ಗಮನಕ್ಕೆ ಬರಬೇಕು. ಗಮನಕ್ಕೆ ಬಂದರೆ ನಾವು ಧ್ವನಿ ಎತ್ತುತ್ತೇವೆ. ಅಧಿಕೃತವಾಗಿ ನಮಗೆ ಮಾಹಿತಿ ಬರಬೇಕು. ವಿಹೆಚ್‌ಪಿ ಮೂಲಕ ಮಾಹಿತಿ ನೀಡಿ. ಆಗ ಅದು ಕೇಂದ್ರ ಮಟ್ಟಕ್ಕೂ ಹೋಗುತ್ತದೆ ಎಂದರು.

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More