ಕಮೀಶನ್ ಬೇಡಿಕೆಯಿಡದೆ ಲೋಕೋಪಯೋಗಿ ಇಲಾಖೆಯ ರೂ. 600 ಕೋಟಿ ಮೊತ್ತದ ಬಿಲ್ ಗಳನ್ನು ಕ್ಲೀಯರ್ ಮಾಡಲಾಗಿದೆ: ಕೆಂಪಣ್ಣ

ಕೇವಲ 5 ದಿನಗಳ ಹಿಂದೆ ಬಿಲ್ ಗಳನ್ನು ಕ್ಲೀಯರ್ ಮಾಡಲು ಅಧಿಕಾರಿಗಳು 40 ಪರ್ಸೆಂಟ್ ಲಂಚ ಕೇಳುತ್ತಿದ್ದಾರೆ ಅಂತ ಕೆಂಪಣ್ಣ ಹೇಳಿದ್ದರು. ಏನ್ಸಾರ್ ಒಂದು ವಾರದೊಳಗೆ ಉಲ್ಟಾ ಹೊಡೀತೀದ್ದೀರಾ ಅಂತ ಮಾಧ್ಯಮಗಳು ಕೇಳಿದಾಗ, ಸಿಡುಕಿದ ಕೆಂಪಣ್ಣ, ತಮ್ಮ ಹೇಳಿಕೆಗೆ ಈಗಲೂ ಬದ್ಧ ಅಂತ ಹೇಳಿ ಪ್ಯಾಕೇಜ್ ಸಿಸ್ಟಂನಲ್ಲಿ ನೀಡುವ ಕಾಮಗಾರಿಗಳಿಗೆ ಕಮೀಶನ್ ಕೇಳಲಾಗುತ್ತಿದೆ, ಅದನ್ನು ರದ್ದು ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾಗಿ ಹೇಳಿದರು.

ಕಮೀಶನ್ ಬೇಡಿಕೆಯಿಡದೆ ಲೋಕೋಪಯೋಗಿ ಇಲಾಖೆಯ ರೂ. 600 ಕೋಟಿ ಮೊತ್ತದ ಬಿಲ್ ಗಳನ್ನು ಕ್ಲೀಯರ್ ಮಾಡಲಾಗಿದೆ: ಕೆಂಪಣ್ಣ
|

Updated on: Feb 13, 2024 | 4:40 PM

ಬೆಂಗಳೂರು: ನಗರದರ ಪ್ರೆಸ್ ಕ್ಲಬ್ ನಲ್ಲಿ  ಇಂದು ಸುದ್ದಿಗೋಷ್ಠಿ ನಡೆಸಿ ಮಾತಾಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna), ಲೋಕೋಪಯೋಗಿ ಇಲಾಖೆಯಲ್ಲಿ (PWD) 1 ಕೋಟಿಗಿಂತ ಕಡಿಮೆ ಇರುವ ಎಲ್ಲ ಬಿಲ್ ಗಳು ಕ್ಲೀಯರ್ ಆಗಿವೆ ಎಂದು ಹೇಳಿದರು. ಕಮೀಶನ್ ಗೆ (commission) ಬೇಡಿಕೆ ಇಡದೆ, 1054 ಸಣ್ಣ ಗುತ್ತಿಗೆದಾರರ ಬಿಲ್ ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಕೆಂಪಣ್ಣ ಹೇಳಿದರು. ಅವರು ಸುದ್ದಿಗೋಷ್ಟಿ ನಡೆಸಿ ಲಂಚ ಡಿಮ್ಯಾಂಡ್ ಮಾಡದೆ 600 ಕೋಟಿ ರೂ. ಮೊತ್ತದ ಬಿಲ್ ಗಳು ಕ್ಲೀಯರ್ ಆಗಿವೆ ಅಂತ ಹೇಳಿದ್ದು ಸಹಜವಾಗೇ ಆಶ್ಚರ್ಯ ಹುಟ್ಟಿಸಿತು. ಯಾಕೆಂದರೆ, ಕೇವಲ 5 ದಿನಗಳ ಹಿಂದೆ ಬಿಲ್ ಗಳನ್ನು ಕ್ಲೀಯರ್ ಮಾಡಲು ಅಧಿಕಾರಿಗಳು 40 ಪರ್ಸೆಂಟ್ ಲಂಚ ಕೇಳುತ್ತಿದ್ದಾರೆ ಅಂತ ಹೇಳಿದ್ದರು. ಏನ್ಸಾರ್ ಒಂದು ವಾರದೊಳಗೆ ಉಲ್ಟಾ ಹೊಡೀತೀದ್ದೀರಾ ಅಂತ ಮಾಧ್ಯಮಗಳು ಕೇಳಿದಾಗ, ಸಿಡುಕಿದ ಕೆಂಪಣ್ಣನವರು, ತಮ್ಮ ಹೇಳಿಕೆಗೆ ಈಗಲೂ ಬದ್ಧ ಅಂತ ಹೇಳಿ ಪ್ಯಾಕೇಜ್ ಸಿಸ್ಟಂನಲ್ಲಿ ನೀಡುವ ಕಾಮಗಾರಿಗಳಿಗೆ ಕಮೀಶನ್ ಕೇಳಲಾಗುತ್ತಿದೆ, ಅದನ್ನು ರದ್ದು ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾಗಿ ಹೇಳಿದರು.

ತಮ್ಮ ಬೇಡಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಸಿಟಿವ್ ಆಗಿ ಸ್ಪಂದಿಸಿದ್ದಾರೆ, ಉಳಿದ ಇಲಾಖೆಗಳಲ್ಲಿ ಬಾಕಿಯಿರುವ ಬಿಲ್ ಗಳನ್ನು ಸಹ ಬಿಡುಗಡೆ ಮಾಡಬೇಕೆಂದು ಅವರನ್ನು ಆಗ್ರಹಿಸಿದ್ದೇವೆ, ಒಂದು ವರ್ಷದೊಳಗಾಗಿ ಬಾಕಿಯಿರುವ ಎಲ್ಲ ಬಿಲ್ ಗಳನ್ನು ಕ್ಲೀಯರ್ ಮಾಡುವ ಭರವಸೆ ಅವರು ನೀಡಿದ್ದಾರೆ ಎಂದು ಕೆಂಪಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿಅ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್