ಕ್ಷೇತ್ರದಾಚೆಯ ಜನ ಸಹ ನನಗೆ ಟಿಕೆಟ್ ಸಿಗಲಿ ಅಂತ ಪ್ರಾರ್ಥಿಸುತ್ತಿದ್ದಾರೆ, ನನ್ನಂಥ ಭಾಗ್ಯಶಾಲಿ ಬೇರ‍್ಯಾರೂ ಇಲ್ಲ: ಪ್ರತಾಪ್ ಸಿಂಹ

ಕೊಡಗು-ಮೈಸೂರು ಭಾಗದ ಜನ ಮಾತ್ರವಲ್ಲ, ಕ್ಷೇತ್ರದಾಚೆಯ ಜನ ಸಹ ಪ್ರತಾಪ್ ಸಿಂಹಗೆ ಟಿಕೆಟ್ ಸಿಗಬೇಕು ಅಂತ ಹಾರೈಸುತ್ತಿದ್ದಾರೆ ಮತ್ತು ಪ್ರಾರ್ಥಿಸುತ್ತಿದ್ದಾರೆ, ತನಗೋಸ್ಕರ ಅವರು ಮಾಡುತ್ತಿರುವ ಪ್ರಚಾರ ಟ್ರೆಂಡಿಂಗ್ ಆಗಿದೆ. ಈ ಪಾಟಿ ಜನರ ಪ್ರೀತಿ ಗಳಿಸಿರುವ ತಾನು ನಿಜಕ್ಕೂ ಭಾಗ್ಯಶಾಲಿ ಎಂದು ಹೇಳಿದರು.

ಕ್ಷೇತ್ರದಾಚೆಯ ಜನ ಸಹ ನನಗೆ ಟಿಕೆಟ್ ಸಿಗಲಿ ಅಂತ ಪ್ರಾರ್ಥಿಸುತ್ತಿದ್ದಾರೆ, ನನ್ನಂಥ ಭಾಗ್ಯಶಾಲಿ ಬೇರ‍್ಯಾರೂ ಇಲ್ಲ: ಪ್ರತಾಪ್ ಸಿಂಹ
| Updated By: ರಮೇಶ್ ಬಿ. ಜವಳಗೇರಾ

Updated on:Mar 15, 2024 | 5:47 PM

ಮೈಸೂರು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ (Kodagu-Mysuru constituency) ಟಿಕೆಟ್ ಹಾಲಿ ಸಂಸದ ಪ್ರತಾಪ್ ಸಿಂಹಗೆ (Pratap Simha) ಸಿಗದಿರುವುದು ಹೆಚ್ಚು ಕಡಿಮೆ ಖಚಿತವಾಗಿದೆ. ಪ್ರತಾಪ್ ಅವರಿಗೆ ಆಘಾತ ಮತ್ತು ದುಃಖ ತಡೆದುಕೊಳ್ಳುವುದು ಕಷ್ಟವಾಗುತ್ತಿದೆ. ಕಳೆದ ರಾತ್ರಿ ಸಾಮಾಜಿಕ ಜಾಲತಾಣವೊಂದರಲ್ಲಿ (social media) ತಮ್ಮ ದುಮ್ಮಾನವನ್ನು ಲೈವ್ ಆಗಿ ಹಂಚಿಕೊಂಡ ಪ್ರತಾಪ್ ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು. ಟಿಕೆಟ್ ತಪ್ಪಿರುವುದು ಇನ್ನೂ ಖಚಿತವಾಗಿಲ್ಲ, ಸಿಈಸಿ ಸಭೆಯಲ್ಲಿದ್ದವರು ಯಾವ ನಿರ್ಧಾರ ತೆಗೆದುಕೊಂಡಿದ್ದಾರೆ ಅನ್ನೋದು ಗೊತ್ತಾಗಿಲ್ಲ. ಆದರೆ ಟಿಕೆಟ್ ಸಿಗಲಿ ಬಿಡಲಿ, ಜನರು ತನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಆಭಾರಿಯಾಗಿರುವುದಾಗಿ ಅವರು ಹೇಳಿದರು. ಕೇವಲ ಕೊಡಗು-ಮೈಸೂರು ಭಾಗದ ಜನ ಮಾತ್ರವಲ್ಲ, ಕ್ಷೇತ್ರದಾಚೆಯ ಜನ ಸಹ ಪ್ರತಾಪ್ ಸಿಂಹಗೆ ಟಿಕೆಟ್ ಸಿಗಬೇಕು ಅಂತ ಹಾರೈಸುತ್ತಿದ್ದಾರೆ ಮತ್ತು ಪ್ರಾರ್ಥಿಸುತ್ತಿದ್ದಾರೆ, ತನಗೋಸ್ಕರ ಅವರು ಮಾಡುತ್ತಿರುವ ಪ್ರಚಾರ ಟ್ರೆಂಡಿಂಗ್ ಆಗಿದೆ. ಈ ಪಾಟಿ ಜನರ ಪ್ರೀತಿ ಗಳಿಸಿರುವ ತಾನು ನಿಜಕ್ಕೂ ಭಾಗ್ಯಶಾಲಿ ಎಂದು ಹೇಳಿದರು. ಆದರೆ, ಇದುವರೆಗೆ ಅಧಿಕೃತ ಘೋಷಣೆಯಾಗಿರದ ಕಾರಣ ಟಿಕೆಟ್ ಸಿಗುವ ವಿಶ್ವಾಸವಂತೂ ತನಗಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:     ಮೈಸೂರು ಕೊಡಗು ಕ್ಷೇತ್ರದಲ್ಲಿ ನಾನು ಗೆದ್ದರೆ ಸಿದ್ದರಾಮಯ್ಯ ಸೀಟು ಅಲುಗಾಡುತ್ತದೆ: ಪ್ರತಾಪ್ ಸಿಂಹ

Published On - 10:21 am, Tue, 12 March 24

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್