AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಕಲ್ಲಿನ ನಂದಿ ವಿಗ್ರಹಕ್ಕೆ ಹಾಲು ನೀರು ಕುಡಿಸುತ್ತಿರುವ ಜನರು; ವಿಡಿಯೋ ವೈರಲ್

ಬೀದರ್: ಕಲ್ಲಿನ ನಂದಿ ವಿಗ್ರಹಕ್ಕೆ ಹಾಲು ನೀರು ಕುಡಿಸುತ್ತಿರುವ ಜನರು; ವಿಡಿಯೋ ವೈರಲ್

ಸುರೇಶ ನಾಯಕ
| Edited By: |

Updated on:Jul 28, 2023 | 3:29 PM

Share

Bidar News: ಬೀದರ್​​ ಜಿಲ್ಲೆಯ ಬಹುತೇಲ ದೇವಸ್ಥಾನಗಳಲ್ಲಿ ನಂದಿ ವಿಗ್ರಹವು ನೀರು ಮತ್ತು ಹಾಲು ಕುಡಿಯುತ್ತದೆ ಎಂಬ ವಿಚಾರ ಸುದ್ದಿಯಲ್ಲಿದೆ. ನಂದಿ ವಿಗ್ರಹಕ್ಕೆ ನೀರು, ಹಾಲು ಕುಡಿಸಲು ಜನರು ಆಗಮಿಸುತ್ತಿದ್ದು, ಇದರ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗುತ್ತಿದೆ.

ಬೀದರ್, ಜುಲೈ 28: ಜಿಲ್ಲೆಯ ಬಹುತೇಕ ದೇವಸ್ಥಾನಗಳಲ್ಲಿ ನಂದಿ ವಿಗ್ರಹ ನೀರು ಕುಡಿಯುವ ವದಂತಿ ಹಬ್ಬುತ್ತಿದೆ. ಬೀದರ್ (Bidar) ತಾಲೂಕಿನ ಧೊಮಸಾಪುರ ಮರಕುಂದ ಚಿಟಗುಪ್ಪಾ ತಾಲೂಕಿನ ನಿರ್ಣಾ, ಮಂಗಲಗಿ, ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಸೇರಿದಂತೆ ಹಲವೆಡೆ ಕಲ್ಲಿನ ನಂದಿ ವಿಗ್ರಹಕ್ಕೆ ಜನರು ಹಾಲು ಕುಡಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ನಂದಿ ವಿಗ್ರಹಗಳಿಗೆ ಚಮಚದಿಂದ ನೀರು ಹಾಲು ಕುಡಿಸಲು ಮಹಿಳಾ ಭಕ್ತರು ಮುಗಿ ಬೀಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jul 28, 2023 03:29 PM
Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More