ಹಾಸನ: ಸಿದ್ದರಾಮಯ್ಯರನ್ನ ನೋಡಲು ಬೇಲಿ ಜಿಗಿದು ಬಂದ ಜನ

ವಿವೇಕ ಬಿರಾದಾರ

Updated on: Mar 05, 2023 | 3:19 PM

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗುತ್ತಿನಕೆರೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ವಿಪಕ್ಷನಾಯಕ ಸಿದ್ದರಾಮಯ್ಯ ಅವರನ್ನು ನೋಡಲು ಜನರು ಬೇಲಿ ನೆಗೆದು ಓಡಿ ಬಂದ್ದಿದ್ದಾರೆ.

ಹಾಸನ: ಜಿಲ್ಲೆಯ ಅರಸೀಕೆರೆ (Arsikere) ತಾಲ್ಲೂಕಿನ ಗುತ್ತಿನಕೆರೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಅವರನ್ನು ನೋಡಲು ಜನರು ಬೇಲಿ ನೆಗೆದು ಓಡಿ ಬಂದ್ದಿದ್ದಾರೆ. ಸಿದ್ದರಾಮಯ್ಯ ಹೆಲಿಕಾಪ್ಟರ್​ನಿಂದ ಇಳಿದು ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದದ್ದರು. ಈ ವೇಳೆ ತಮ್ಮ ನಾಯಕನನ್ನು ನೋಡಲು ಹೊಲದೊಳಗೆ ಓಡಿ ಬೇಲಿ ನೆಗೆದು ಧಾವಿಸಿ ಜನರು ಬಂದಿದ್ದಾರೆ. ಅರಸೀಕೆರೆಯ ಗುತ್ತಿನಕೆರೆಯಲ್ಲಿ ಶಾಸಕ ಶಿವಲಿಂಗೇಗೌಡ ನೇತೃತ್ವದಲ್ಲಿ ಬೃಹತ್ ಬಹಿರಂಗ ಸಭೆ ನಡೆದಿದೆ.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.