ಪೀತೆಬೈಲ್ ಅರಣ್ಯಪ್ರದೇಶದಲ್ಲಿ ವಾಸವಾಗಿರುವ ಜನ ನಕ್ಸಲ್ ಚಲನವಲನಗಳ ಬಗ್ಗೆ ಹೇಳೋದೇನು?

ಅರುಣ್​ ಕುಮಾರ್​ ಬೆಳ್ಳಿ

Updated on: Nov 19, 2024 | 6:26 PM

ನಿನ್ನೆ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಹತನಾದ ವಿಕ್ರಂಗೌಡ ಕುದುರೆಮುಖ ರಾಷ್ಟ್ರೀಯ ಉದ್ಯಾನವಕ್ಕಾಗಿ ವಿಮೋಚನಾರಂಗದ ಜೊತೆ ಗುರುತಿಸಿಕೊಂಡಿದ್ದ, ವಿಮೋಚನಾರಂಗದವರು ಕುದುರೆ ಮುಖ ಹೋರಾಟದಲ್ಲಿ ತಮಗೆ ಬೆಂಬಲ ನೀಡುವಂತೆ ಒತ್ತಾಯಿಸುತ್ತಿದ್ದರು ಎಂದು ರಾಜುಗೌಡ ಹೇಳುತ್ತಾರೆ.

ಉಡುಪಿ: ಕಬ್ಬಿನಾಲೆ ಪೀತೆಬೈಲ್ ಅರಣ್ಯಪ್ರದೇಶದಲ್ಲಿ ಜನಸಾಮಾನ್ಯರೂ ವಾಸವಾಗಿದ್ದು ಅವರ ಮನೆಗಳಿಗೆ ನಕ್ಸಲರು ಭೇಟಿ ನೀಡಿದ ಸಂದರ್ಭಗಳಿವೆ. ಆದರೆ ಅವರು ನಕ್ಸಲರು ಅಂತ ಗೊತ್ತಾದ ಬಳಿಕ ಅವರನ್ನು ದೂರ ಇಟ್ಟಿದ್ದಾಗಿ ಅರಣ್ಯಪ್ರದೇಶದಲ್ಲಿ ವಾಸವಾಗಿರುವ ರಾಜುಗೌಡ ಹೆಸರಿನ ವ್ಯಕ್ತಿ ಹೇಳುತ್ತಾರೆ. ತಮ್ಮ ಭಾಗದ ಯಾವ ಹುಡುಗರೂ ನಕ್ಸಲರ ಜೊತೆ ಸೇರಲಿಲ್ಲ, ತಮ್ಮ ಬದುಕು ಕಂಡುಕೊಳ್ಳಲು ಅವರು ಮುಂಬೈ ಸೇರಿದರು ಎಂದು ಅವರು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮತ್ತೆ ಆಕ್ಟಿವ್​ ಆದ ನಕ್ಸಲರು: ಉಡುಪಿ, ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್​​

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.