ಮನೆ ಅಥವಾ ಸೈಟು ನೋಂದಣಿ ಮಾಡಿಸಿಕೊಳ್ಳಲು ಇನ್ನು ಉಪ-ನೋಂದಾಣಿಧಿಕಾರಿ ಕಚೇರಿಗೆ ಹೋಗುವ ಅಗತ್ಯವಿಲ್ಲ: ಆರ್ ಅಶೋಕ, ಕಂದಾಯ ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Mar 02, 2023 | 6:42 PM

ಕಾವೇರಿ-2 ತಂತ್ರಾಶವನ್ನ ಆಳವಡಿಸುವ ಮೂಲಕ ನೋಂದಣಿ ಕೆಲಸ ಸುಲಭ ಮತ್ತು ಸರಳ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಬೆಂಗಳೂರು: ಸೈಟು ಮತ್ತು ಮನೆಗಳನ್ನು ಉಪ-ನೋಂದಣಾಧಿಕಾರಿ ಕಚೇರಿಗೆ ಹೋಗಿ ನೋಂದಾಯಿಸಿಕೊಂಡು ಸಂಬಂಧಪಟ್ಟ ದಾಖಲೆಗಳನ್ನು ಪಡೆದುಕೊಳ್ಳುವುದು ಬಹಳ ತ್ರಾಸದಾಯಕ ಮತ್ತು ಅಷ್ಟೇ ಗೋಜಿನ ಕೆಲಸ. ಮಧ್ಯವರ್ತಿಗಳಿಲ್ಲದೆ (brokers) ಕಚೇರಿಯಲ್ಲಿ ನಿಮ್ಮ ಕೆಲಸವಾಗದು. ದಶಕಗಳಿಂದ ಇದು ಹಾಗೆ ನಡೆದುಕೊಂಡು ಬಂದಿದೆ. ಆದರೆ ಈ ಪದ್ಧತಿ, ವ್ಯವಸ್ಥೆಯನ್ನೇ ಬದಲಾಯಿಸುವ ಕ್ತಾಂತಿಕಾರಿ ವಿಧಾನವನ್ನು ಜಾರಿಗೊಳಿಸುವ ಪ್ರಯತ್ನ ಜಾರಿಯಲ್ಲಿದೆ ಎಂದು ಕಂದಾಯ ಸಚಿವ ಆರ್ ಆಶೋಕ (R Ashoka) ಇಂದು ಬೆಂಗಳೂರಲ್ಲಿ ಹೇಳಿದರು. ಪತ್ರಿಕಾ ಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಸಚಿವರು ಕಾವೇರಿ-2 ತಂತ್ರಾಶವನ್ನು (Kaveri-2 software) ಆಳವಡಿಸುವ ಮೂಲಕ ನೋಂದಣಿ ಕೆಲಸ ಸುಲಭ ಮತ್ತು ಸರಳ ಮಾಡಲಾಗುವುದು. ಈ ಪದ್ಧತಿ ನವೀನ ಜನಸ್ನೇಹಿ, ವಂಚನೆರಹಿತ ವಾಗಿದೆ ಮತ್ತು ಮಧ್ಯವರ್ತಿಗಳ ಹಾವಳಿಯನ್ನು ಕ್ರಮೇಣ ದೂರಮಾಡಲಿದೆ ಎಂದು ಹೇಳಿದರು. ತಮ್ಮ ನಿವೇಶನ ಅಥವಾ ಮನೆ ನೋಂದಣಿ ಮಾಡಿಸಬೇಕೆನ್ನುವವರು ಮನೆಯಲ್ಲೇ ಕೂತು ತಮ್ಮ ಕೆಲಸ ಮಾಡಿಕೊಳ್ಳಬಹುದು ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.