AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಭಾರತ್ ಅಕ್ಕಿಗಾಗಿ ಮುಗಿಬಿದ್ದ ಜನ: ಕೆಲವೇ ಕ್ಷಣಗಳಲ್ಲಿ ಒಂದು ಲಾರಿ ಲೋಡ್ ಖಾಲಿ

ಕೋಲಾರದಲ್ಲಿ ಭಾರತ್ ಅಕ್ಕಿಗಾಗಿ ಮುಗಿಬಿದ್ದ ಜನ: ಕೆಲವೇ ಕ್ಷಣಗಳಲ್ಲಿ ಒಂದು ಲಾರಿ ಲೋಡ್ ಖಾಲಿ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Feb 08, 2024 | 5:14 PM

Share

ನಿನ್ನೆಯಷ್ಟೇ ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ಭಾರತ್ ಅಕ್ಕಿ(bharat brand rice) ಪಡೆಯಲು ಜನರು ಮುಗಿಬಿದ್ದ ಘಟನೆ ನಡೆದಿತ್ತು. ಅದೆಷ್ಟೋ ಜನ ಅಕ್ಕಿ ಸಿಗದೇ ನಿರಾಸೆಗೊಂಡಿದ್ದರು. ಈ ಹಿನ್ನಲೆ ಇಂದು ಕೋಲಾರ (Kolar) ನಗರದ ಡೂಂ‌ ಲೈಟ್ ಸರ್ಕಲ್​ನಲ್ಲಿ ಬಿಜೆಪಿಯಿಂದ ಭಾರತ್ ಅಕ್ಕಿ ವಿತರಣೆ ಮಾಡಲಾಗಿದೆ.

ಕೋಲಾರ, ಫೆ.07: ಕೇಂದ್ರ ಸರ್ಕಾರದ ಭಾರತ್  ಬ್ರ್ಯಾಂಡ್ ಅಕ್ಕಿ (Bharat Brand Rice)ಯೋಜನೆಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಫೆಬ್ರವರಿ 06 ರಂದು ಚಾಲನೆ‌ ನೀಡಿದರು. ಅದರಂತ ಕೋಲಾರ (Kolar) ನಗರದ ಡೂಂ‌ ಲೈಟ್ ಸರ್ಕಲ್​ನಲ್ಲಿ ಬಿಜೆಪಿ ಮುಖಂಡರು ಭಾರತ್ ಅಕ್ಕಿ ವಿತರಣೆ ಮಾಡಿದರು. ಪ್ರತಿ ಕೆಜಿಗೆ 29ರೂ ನಂತೆ ಹತ್ತು ಕೆಜಿ ಅಕ್ಕಿಯ ಬ್ಯಾಗ್ ವಿತರಿಸಲಾಗಿದೆ. ಈ ವೇಳೆ ಅಕ್ಕಿ ಪಡೆಯಲು ಜನರ ನೂಕು ನುಗ್ಗಲು ನಿರ್ಮಾಣವಾಗಿದ್ದು, ಕೆಲವೇ ಕ್ಷಣಗಳಲ್ಲಿ ಒಂದು ಲಾರಿ ಲೋಡ್ ಅಕ್ಕಿ ಖಾಲಿಯಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Published on: Feb 07, 2024 08:00 PM
Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More