ತುಮಕೂರು: ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಲು ಪಾವಗಡ ಎಸ್ ಬಿಐ ಶಾಖೆಯೆದುರು ಜನಜಂಗುಳಿ!

ಅರುಣ್​ ಕುಮಾರ್​ ಬೆಳ್ಳಿ

Updated on: Aug 03, 2023 | 11:35 AM

ಯುವನಿಧಿಯೊಂದನ್ನು ಬಿಟ್ಟು ಉಳಿದ 4 ಗ್ಯಾರಂಟಿಗಳು ಒಂದೋ ಜಾರಿಗೊಂಡಿವೆ ಇಲ್ಲವೇ ನೋಂದಣಿ ಪ್ರಕ್ರಿಯೆ ಜಾರಿಯಲ್ಲಿದೆ, ಅನ್ನ ಭಾಗ್ಯ ಯೋಜನೆಯಡಿ ಕಾರ್ಡ್ ಹೊಂದಿರುವವರ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗುತ್ತಿದೆ.

ತುಮಕೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು (guarantees) ಜನರನ್ನು ಸೇವಾ ಸಿಂಧು ಕೇಂದ್ರ, ವಿವಿಧ ಜಿಲ್ಲೆಗಳ ವನ್ ಕೇಂದ್ರಗಳು ಮತ್ತು ಬ್ಯಾಂಕ್ ಗಳ ಮುಂದೆ ಸಾಲುಗಟ್ಟುವಂತೆ ಮಾಡುತ್ತಿವೆ. ಯುವನಿಧಿಯೊಂದನ್ನು ಬಿಟ್ಟು ಉಳಿದ 4 ಗ್ಯಾರಂಟಿಗಳು ಒಂದೋ ಜಾರಿಗೊಂಡಿವೆ ಇಲ್ಲವೇ ನೋಂದಣಿ ಪ್ರಕ್ರಿಯೆ (registration process) ಜಾರಿಯಲ್ಲಿದೆ. ತುಮಕೂರಿನ ಪಾವಗಡದಿಂದ (Pavagada) ಲಭ್ಯವಾಗಿರುವ ಈ ದೃಶ್ಯ ನೋಡಿ. ಗ್ಯಹ ಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆನಗಳ ಅಡಿ ಫಲಾನುಭವಿಗಳಾಗಲು ಬ್ಯಾಂಕ್ ಖಾತೆ ಹೊಂದಿರಬೇಕು ಮತ್ತು ಖಾತೆಗಳಿಗೆ ಆಧಾರ್ ಮತ್ತು ಪ್ಯಾನ್ ಕಾರ್ಡ್​ಗಳ ಸಂಖ್ಯೆ, ಮೊಬೈಲ್ ನಂಬರ್ ಗಳು ಲಿಂಕ್ ಆಗಬೇಕಿರುವುದು ಅತ್ಯವಶ್ಯಕವಾಗಿದೆ. ಪಾವಗಡ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಮುಂದೆ ಜನ ತಮ್ಮ ಕೆಲಸಗಳನ್ನು ಮಾಡಿಕೊಳ್ಳಲು ಜಾತ್ರೆಯಂತೆ ನೆರೆದಿದ್ದಾರೆ. ತಳ್ಳಾಟ-ನೂಕಾಟದ ನಡುವೆ ಕೆಲವರು ಬ್ಯಾಂಕಿನ ಕಂಪೌಂಡ್ ಹಾರುತ್ತಿದ್ದಾರೆ.
.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.