Prajadhvani Yatre: ನಿದ್ದೆಯಿಂದೆದ್ದ ಸಿದ್ದರಾಮಯ್ಯ ನೇರವಾಗಿ ಜನರಲ್ಲಿಗೆ ಬಂದು ಅಹವಾಲುಗಳನ್ನು ಸ್ವೀಕರಿಸಿದರು!
ಸಿದ್ದರಾಮಯ್ಯ ಟಿ ಶರ್ಟ್ ಧರಿಸಿ ಕೆದರಿದ ಕ್ರಾಪಿನೊಂದಿಗೆ ಜನರ ನಡುವೆ ಕಾಣಿಸಿಕೊಳ್ಳುತ್ತಾರೆ. ತಮ್ಮ ವಿಶ್ರಾಂತಿಗೆ ಭಂಗವುಂಟಾದರೂ ಸಿದ್ದರಾಮಯ್ಯ ಬೇಸರಿಸಿಕೊಳ್ಳದೆ ಮುಗಳ್ನಗುತ್ತಾ ಜನರೊಂದಿಗೆ ಬೆರೆಯುತ್ತಾರೆ.
ವಿಜಯಪುರ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೋ ಬಿಡುತ್ತೋ, ಸಿದ್ದರಾಮಯ್ಯ (Siddaramaiah) ಪುನಃ ಮುಖ್ಯಮಂತ್ರಿಯಾಗ್ತಾರೋ ಇಲ್ಲವೋ ನಮಗೆ ಗೊತ್ತಿಲ್ಲ ಮಾರಾಯ್ರೇ. ಆದರೆ ನಮಗೆ ಗೊತ್ತಿರುವ ಸಂಗತಿಯೆಂದರೆ, ಸಿದ್ದರಾಮಯ್ಯನವರ ಜನಪ್ರಿಯತೆ (popularity). ಅವರ ನೇತೃತ್ವದ ಪ್ರಜಾಧ್ವನಿ ಯಾತ್ರೆ (Prajadhvani Yatre) ವಿಜಯಪುರಕ್ಕೆ ಆಗಮಿಸಿದ್ದು ಗುರುವಾರ ಬೆಳಗ್ಗೆ ಬಿಎಲ್ ಡಿಈ ಸಂಸ್ಥೆಯ ಅತಿಥಿ ಗೃಹದಲ್ಲಿ ಪ್ರಾಯಶಃ ಇನ್ನೂ ನಿದ್ರಿಸುತ್ತಿದ್ದ ಸಿದ್ದರಾಮಯ್ಯನವರನ್ನು ನೋಡಲು ಜನ ಆಗಮಿಸಿದರು. ವಿಡಿಯೋದಲ್ಲಿ ನೋಡಿ, ಸಿದ್ದರಾಮಯ್ಯ ಟಿ ಶರ್ಟ್ ಧರಿಸಿ ಕೆದರಿದ ಕ್ರಾಪಿನೊಂದಿಗೆ ಜನರ ನಡುವೆ ಕಾಣಿಸಿಕೊಳ್ಳುತ್ತಾರೆ. ತಮ್ಮ ವಿಶ್ರಾಂತಿಗೆ ಭಂಗವುಂಟಾದರೂ ಸಿದ್ದರಾಮಯ್ಯ ಬೇಸರಿಸಿಕೊಳ್ಳದೆ ಮುಗಳ್ನಗುತ್ತಾ ಜನರೊಂದಿಗೆ ಬೆರೆಯುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
