Karnataka Assembly Polls: ಜನರನ್ನು ಸೇರಿಸುವ ಅಗತ್ಯವಿಲ್ಲ, ಗ್ಲೋಬಲ್ ಲೀಡರ್ ಮೋದಿ ನೋಡಲು ಸ್ವಪ್ರೇರಣೆಯಿಂದ ಬರುತ್ತಿದ್ದಾರೆ: ಪಿಸಿ ಮೋಹನ್, ಸಂಸದ

Updated on: May 06, 2023 | 11:09 AM

ಪ್ರಧಾನಿ ಮೋದಿಯನ್ನು ನೋಡಲು ಜನ ಆಫೀಸುಗಳಿಗೆ ರಜೆ ಹಾಕಿದ್ದಾರೆ ಮತ್ತು ತಮ್ಮ ನಿಗದಿತ ದಿನಚರಿಗಳನ್ನು ಮುಂದೂಡಿದ್ದಾರೆ ಎಂದು ಮೋಹನ್ ಹೇಳಿದರು.

ಬೆಂಗಳೂರು: ನಗರದ 13 ವಿಧಾನಸಭಾ ಕ್ಷೇತ್ರಗಳ ಮೂಲಕ ಹಾದುಹೋಗುವ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ರೋಡ್ ಶೋ ಆರಂಭವಾಗಿದೆ. ರೋಡ್ ಶೋ ಅರಂಭಗೊಳ್ಳುವ ಕೆಲ ನಿಮಿಷ ಮೊದಲು ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ ರೋಡ್ ಶೋ ಅಯೋಜನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್ (PC Mohan) ಜೊತೆ ಮಾತುಕತೆ ನಡೆಸಿದ್ದಾರೆ. ಸಂಸದರು ಹೇಳುವ ಪ್ರಕಾರ, ಬಿಜೆಪಿ ಕಾರ್ಯಕರ್ತರಿಗೆ ಜನರನ್ನು ಸೇರಿಸುವ ಪ್ರಮೇಯವೇ ಉದ್ಭವಿಸಿಲ್ಲ, ಅವರೆಲ್ಲ ಸ್ವಪ್ರೇರಣೆಯಿಂದ (voluntarily) ಪ್ರಧಾನಿಯವರನ್ನು ನೋಡಲು ಆಗಮಿಸುತ್ತಿದ್ದಾರೆ. ಅಪಾರ್ಟ್ಮೆಂಟ್ ಗಳಲ್ಲಿ ವಾಸವಾಗಿರುವ ಜನ ಅವರು ಬರುವ ಸಮಯ ತಿಳಿಸಿ ಅವರನ್ನು ಕಣ್ಣಾರೆ ನೋಡಬೇಕು ಎಂದಿದ್ದಾರಂತೆ. ಪ್ರಧಾನಿ ಮೋದಿ ಒಬ್ಬ ಗ್ಲೋಬಲ್ ಲೀಡರ್, ಅವರನ್ನು ನೋಡಲು ಜನ ಆಫೀಸುಗಳಿಗೆ ರಜೆ ಹಾಕಿದ್ದಾರೆ ಮತ್ತು ತಮ್ಮ ನಿಗದಿತ ದಿನಚರಿಗಳನ್ನು ಮುಂದೂಡಿದ್ದಾರೆ ಎಂದು ಮೋಹನ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More