ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟದ ವಿಡಿಯೋ ನೋಡಿ

Edited By:

Updated on: Jun 28, 2024 | 8:35 PM

ಎತ್ತುಗಳು, ಹೋರಿಗಳನ್ನು ಬೆದರಿಸಿ ಓಡಿಸುವುದನ್ನು ನೋಡಲು ಜನರು ತಮ್ಮ ಜೀವವನ್ನೇ ಪಣಕ್ಕಿಟ್ಟು ಟಿಸಿ ಅಂದರೆ ವಿದ್ಯುತ್ ಪರಿವರ್ತ ಕಂಬಗಳ ಮೇಲೇರಿರುವ ದೃಶ್ಯ ನಿಜಕ್ಕೂ ಎಂಥವರನ್ನು ಒಂದು ಕ್ಷಣ ಬೆಚ್ಚಿಬೀಳಿಸುತ್ತದೆ. ಇಂಥಹದೊಂದು ಭಯಾನಕ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಗಿ ಗ್ರಾಮದಲ್ಲಿ ಇಂದು ನಡೆದಿದೆ. ಜನರ ದುಸ್ಸಾಹಸ ಎಂಥದ್ದು ನೀವೇ ನೋಡಿ.

ವಿಜಯಪುರ, ಜೂನ್​ 28: ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಗಿ ಗ್ರಾಮದಲ್ಲಿ ಇಂದು ಕಾರ ಹುಣ್ಣಿಮೆ (kara hunnime)  ಪ್ರಯುಕ್ತ ಎತ್ತು, ಹೋರಿ ಬೆದರಿಸುವ ಆಚರಣೆ ಮಾಡಲಾಗಿದೆ. ಈ ವೇಳೆ ಓರ್ವ ಯುವಕನಿಗೆ ಹೋರಿ ತಿವಿದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಘಟನೆ ಒಂದು ಕಡೆಯಾದರೆ, ಮತ್ತೊಂದು ಭಯಾನಕ ಘಟನೆ ಸಂಭವಿಸುವುದು ಸ್ವಲ್ಪದರಲ್ಲೇ ತಪ್ಪಿದೆ. ಎತ್ತುಗಳು, ಹೋರಿಗಳನ್ನು ಬೆದರಿಸಿ ಓಡಿಸುವುದನ್ನು ನೋಡಲು ಜನರು ತಮ್ಮ ಜೀವವನ್ನೇ ಪಣಕ್ಕಿಟ್ಟು ಟಿಸಿ ಅಂದರೆ ವಿದ್ಯುತ್ ಪರಿವರ್ತ ಕಂಬಗಳ (electric transformer) ಮೇಲೇರಿರುವ ದೃಶ್ಯ ನಿಜಕ್ಕೂ ಎಂಥವರನ್ನು ಒಂದು ಕ್ಷಣ ಬೆಚ್ಚಿಬೀಳಿಸುತ್ತದೆ. ಲೈಟ್ ಕಂಬಗಳ ಮೇಲಿನ ತಂತಿಗಳನ್ನು ಕೈಯ್ಯಲ್ಲಿ ಹಿಡಿದುಕೊಂಡು ಹತ್ತಾರು ಜನರು ನಿಂತಿರುವುದು ಆಘಾತಕಾರಿಯಾಗಿದೆ. ಹಬ್ಬದ ಪ್ರಯುಕ್ತ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿ ಎನ್ನಲಾಗಿದೆ. ಆದರೆ ಅಚಾನಕ್ ಆಗಿ ಒಂದು ವೇಳೆ ವಿದ್ಯುತ್​ ಪ್ರವಹಿಸಿದ್ದೇ ಆದರೆ ಹತ್ಯಾಕಾಂಡ ನಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಇನ್ನು ಈ ವೇಳೆ ಪೊಲೀಸರು ಕೂಡ ಅಲ್ಲೇ ಇದ್ದು ಯಾವುದೇ ಕ್ರಮಕೈಗೊಂಡಿಲ್ಲ ಎನ್ನಲಾಗುತ್ತಿದೆ. ಜನರ ಈ ದುಸ್ಸಾಹಸಕ್ಕೆ  ಜಿಲ್ಲಾಡಳಿತ ಹಾಗೂ ಪೊಲೀಸ್​ ಸರಿಯಾದ ಕ್ರಮಕೈಗೊಳ್ಳಬೇಕಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More