ಲೋಕಸಭಾ ಚುನಾವಣೆ ಫಲಿತಾಂಶ; ನನ್ನಿಂದ ಚಿಕಿತ್ಸೆ ಪಡೆದವರ ಪ್ರೀತಿ-ಅಭಿಮಾನ ವೋಟುಗಳಲ್ಲಿ ಪರಿವರ್ತನೆಯಾಗಿದೆ: ಡಾ ಮಂಜುನಾಥ್

ಲೋಕಸಭಾ ಚುನಾವಣೆ ಫಲಿತಾಂಶ: ಕೇಂದ್ರದ ಹೊಸ ಸರ್ಕಾರದಲ್ಲಿ ತಾವು ಆರೋಗ್ಯ ಸಚಿವನಾದರೆ, ಆಯುಷ್ಮಾನ್ ಭಾರತ್ ಯೋಜನೆಗೆ ಮತ್ತಷ್ಟ್ಟು ಕಾಯಕಲ್ಪ ನೀಡುವುದರ ಜೊತೆಗೆ ಗ್ರಾಮೀಣ ಭಾಗಗಳ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳು ಮತ್ತು ಮಾನವ ಸಂಪನ್ಮೂಲಗಳನ್ನು ಹೆಚ್ಚಿಸುವ ಕಡೆ ಗಮನ ನೀಡುವುದಾಗಿ ಹೇಳಿದರು.

ಲೋಕಸಭಾ ಚುನಾವಣೆ ಫಲಿತಾಂಶ; ನನ್ನಿಂದ ಚಿಕಿತ್ಸೆ ಪಡೆದವರ ಪ್ರೀತಿ-ಅಭಿಮಾನ ವೋಟುಗಳಲ್ಲಿ ಪರಿವರ್ತನೆಯಾಗಿದೆ: ಡಾ ಮಂಜುನಾಥ್
|

Updated on: Jun 04, 2024 | 1:26 PM

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಖ್ಯಾತ ಹೃದ್ರೋಗ ತಜ್ಞ (cardiologist) ಡಾ ಸಿಎನ್ ಮಂಜುನಾಥ್ (Dr CN Manjunath) ಒಂದು ಅರ್ಹ ಗೆಲುವಿನತ್ತ ಸಾಗಿದ್ದಾರೆ. ನಗರದ ಮತ ಎಣಿಕೆ ಕೇಂದ್ರವೊಂದರ ಬಳಿ ಟಿವಿ9 ಪ್ರತಿನಿಧಿಯೊಂದಿಗೆ ಮಾತಾಡಿದ ಅವರಿಗೆ ರಾಜ್ಯದ ಉಪ ಮುಖ್ಯಮಂತ್ರಿಯ ಸಹೋದರ ಮತ್ತು ನಾಲ್ಕನೇ ಬಾರಿಗೆ ಆಯ್ಕೆ ಬಯಸಿದ್ದ ಡಿಕೆ ಸುರೇಶ್ (DK Suresh) ವಿರುದ್ಧ ಗೆಲುವು ಸಾಧಿಸುವುದು ಸುಲಭವಾಗಿರಲಿಲ್ಲ. ತಮ್ಮ ಗೆಲುವಿಗೆ ಕಾರಣವಾದ ಸಂಗತಿಗಳ ಬಗ್ಗೆ ಮಾತಾಡಿದ ಡಾಕ್ಟರ್ ಮಂಜುನಾಥ್, ಕಳೆದ 40 ವರ್ಷಗಳಿಂದ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಹೃದ್ರೋಗ ಪರಿಣಿತನಾಗಿ ಲಕ್ಷಾಂತರ ಜನಕ್ಕೆ ಚಿಕಿತ್ಸೆ ಒದಗಿಸಿದ್ದು ನೆರವಿಗೆ ಬಂದಿದೆ. ಗ್ರಾಮಾಂತರ ಕ್ಷೇತ್ರದ ಪ್ರತಿ ಹಳ್ಳಿಯಲ್ಲಿ ತನ್ನಿಂದ ಚಿಕಿತ್ಸೆ ಪಡೆದ 15-20 ಜನ ಸಿಗುತ್ತಿದ್ದರು, ಅವರಲ್ಲಿ ಡಾಕ್ಟರ್ ಅನ್ನು ಗೆಲ್ಲಿಸಬೇಕೆಂಬ ಆಸೆಯಿತ್ತು ಮತ್ತು ಅದು ಮತಗಳಲ್ಲಿ ಪರಿವರ್ತನೆಯಾಯಿತು ಎಂದು ಮಂಜುನಾಥ್ ಹೇಳಿದರು. ಕೆಲವು ಊರುಗಳಲ್ಲಿ ಜನ ನಾವು ಇದುವರೆಗೆ ನಿದ್ರೆಯಲ್ಲಿದ್ದೆವು ಈಗ ಜಾಗೃತರಾಗಿದ್ದೇವೆ ಅಂತ ತಮ್ಮ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಅವರು ಹೇಳಿದರು. ಕೇಂದ್ರದ ಹೊಸ ಸರ್ಕಾರದಲ್ಲಿ ತಾವು ಆರೋಗ್ಯ ಸಚಿವನಾದರೆ, ಆಯುಷ್ಮಾನ್ ಭಾರತ್ ಯೋಜನೆಗೆ ಮತ್ತಷ್ಟ್ಟು ಕಾಯಕಲ್ಪ ನೀಡುವುದರ ಜೊತೆಗೆ ಗ್ರಾಮೀಣ ಭಾಗಗಳ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳು ಮತ್ತು ಮಾನವ ಸಂಪನ್ಮೂಲಗಳನ್ನು ಹೆಚ್ಚಿಸುವ ಕಡೆ ಗಮನ ನೀಡುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರು: ಬಿಜೆಪಿ ಕಚೇರಿಗೆ ಇಂದು ಅನಿರೀಕ್ಷಿತ ಭೇಟಿ ನೀಡಿದಾಗಲೂ ಡಾ ಸಿಎನ್ ಮಂಜುನಾಥ್ ಟೈ ಧರಿಸಿದ್ದರು!

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ