ನಮ್ಮ ಕೆಲಸ ಖಾಯಂ ಮಾಡದಿದ್ದರೆ ವಿಧಾನಸೌಧದ ಮುಂದೆ ವಿಷ ಕುಡಿಯುತ್ತೇವೆ

Updated on: Mar 08, 2023 | 8:59 PM

ಅನುದಾನಿತ ಶಾಲಾ ಶಿಕ್ಷಕರ ಖಾಯಂ ನೇಮಕಾತಿ ಮಾಡುವಂತೆ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಶಿಕ್ಷಕರು ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು: ಅನುದಾನಿತ ಶಾಲಾ ಶಿಕ್ಷಕರ (Teachers) ಖಾಯಂ ನೇಮಕಾತಿ ಮಾಡುವಂತೆ ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಶಿಕ್ಷಕರು ಮನವಿ ಸಲ್ಲಿಸಿದ್ದಾರೆ. ನಮ್ಮ ಕೆಲಸವನ್ನು ಖಾಯಂ ಮಾಡದಿದ್ದರೆ ವಿಧಾನಸೌಧದ ಮುಂದೆಯೇ ವಿಷ ಕುಡಿಯುತ್ತೇವೆ ಎಂದು ಮನವಿ ಸಲ್ಲಿಸುವಾಗ ಶಿಕ್ಷಕರು ಕಣ್ಣೀರು ಹಾಕಿದ್ದಾರೆ. 576 ಶಿಕ್ಷಕರ ಭವಿಷ್ಯ ಪ್ರಶ್ನೆಯಾಗಿದ್ದು, ಚುನಾವಣಾ ನೀತಿ ಜಾರಿ ಒಳಗಡೆ ಸರ್ಕಾರಿ ಇದನ್ನ ಮಾಡಿಕೊಡಬೇಕು, ಇಲ್ಲವೆಂದರೆ ನಾವು ನಮ್ಮ ಊರಿಗೆ ಹೋಗುವುದಿಲ್ಲ. ಸಿಎಂ ಮುಂದೆಯೇ ವಿಷ ಕುಡಿಯುತ್ತೇವೆ ಎಂದು ಅಳಲು ತೊಡಿಕೊಂಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Published on: Mar 08, 2023 08:58 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More