ಪ್ರಾಸಿಕ್ಯೂಷನ್ಗೆ ಅನುಮತಿ: ಉಪವಾಸ ಸತ್ಯಾಗ್ರಹ ನಿರತ ಸಿದ್ದರಾಮಯ್ಯ ಅಭಿಮಾನಿ ಅಸ್ವಸ್ಥ
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ನಿನ್ನೆ ಅನುಮತಿ ಕೊಟ್ಟಿದ್ದೇ ತಡ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದು ಅಭಿಮಾನಿಗಳು ನಿನ್ನೆಯೇ ರಸ್ತೆಗೆ ಇಳಿದಿದ್ರು. ಇವತ್ತು ಕೂಡಾ ರಾಜ್ಯದ ಉದ್ದಗಲಕ್ಕೂ ಹೋರಾಟ ಮುಂದುವರಿದಿತ್ತು. ಇತ್ತ ಯಾದಗಿರಿಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತ್ತಿದ್ದು, ಸತ್ಯಾಗ್ರಹದಲ್ಲಿ ನಿರತವಾಗಿರುವಾಗಲೇ ಅಸ್ವಸ್ಥಗೊಂಡಿರುವಂತಹ ಘಟನೆ ನಡೆದಿದೆ.
ಯಾದಗಿರಿ, ಆಗಸ್ಟ್ 18: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರವಾಗಿ ಕರ್ನಾಟಕದಲ್ಲಿ ಎಲ್ಲೆಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಇತ್ತ ನಗರದ ಸುಭಾಷ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕದ ಸಿದ್ದರಾಮಯ್ಯ (Siddaramaiah) ಅಭಿಮಾನಿ ಬ್ರಿಗೇಡ್ ರಾಜ್ಯಾಧ್ಯಕ್ಷ ರಾಜಕುಮಾರ್ ಗಣೇಶ್ರಿಂದ ಉಪವಾಸ ಸತ್ಯಾಗ್ರಹಕ್ಕೆ ಕುಳಿತುಕೊಂಡಿದ್ದಾರೆ. ಸತ್ಯಾಗ್ರಹ ನಿರತವಾಗಿರುವಾಗಲೇ ರಾಜಕುಮಾರ್ ಗಣೇಶ್ ಅಸ್ವಸ್ಥರಾಗಿದ್ದಾರೆ. ನಸುಕಿನ ಜಾವದಿಂದಲೇ ರಾಜಕುಮಾರ್ ಏಕಾಂಗಿ ಹೋರಾಟ ಮಾಡುತ್ತಿದ್ದರು. ಈ ವೇಳೆ ನಿತ್ರಾಣಗೊಂಡು ಅಸ್ವಸ್ಥಗೊಂಡಿದ್ದಾರೆ. ಬಳಿಕ ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
