ಪ್ರಾಸಿಕ್ಯೂಷನ್ಗೆ ಅನುಮತಿ: ಉಪವಾಸ ಸತ್ಯಾಗ್ರಹ ನಿರತ ಸಿದ್ದರಾಮಯ್ಯ ಅಭಿಮಾನಿ ಅಸ್ವಸ್ಥ
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ನಿನ್ನೆ ಅನುಮತಿ ಕೊಟ್ಟಿದ್ದೇ ತಡ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದು ಅಭಿಮಾನಿಗಳು ನಿನ್ನೆಯೇ ರಸ್ತೆಗೆ ಇಳಿದಿದ್ರು. ಇವತ್ತು ಕೂಡಾ ರಾಜ್ಯದ ಉದ್ದಗಲಕ್ಕೂ ಹೋರಾಟ ಮುಂದುವರಿದಿತ್ತು. ಇತ್ತ ಯಾದಗಿರಿಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತ್ತಿದ್ದು, ಸತ್ಯಾಗ್ರಹದಲ್ಲಿ ನಿರತವಾಗಿರುವಾಗಲೇ ಅಸ್ವಸ್ಥಗೊಂಡಿರುವಂತಹ ಘಟನೆ ನಡೆದಿದೆ.
ಯಾದಗಿರಿ, ಆಗಸ್ಟ್ 18: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರವಾಗಿ ಕರ್ನಾಟಕದಲ್ಲಿ ಎಲ್ಲೆಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಇತ್ತ ನಗರದ ಸುಭಾಷ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕದ ಸಿದ್ದರಾಮಯ್ಯ (Siddaramaiah) ಅಭಿಮಾನಿ ಬ್ರಿಗೇಡ್ ರಾಜ್ಯಾಧ್ಯಕ್ಷ ರಾಜಕುಮಾರ್ ಗಣೇಶ್ರಿಂದ ಉಪವಾಸ ಸತ್ಯಾಗ್ರಹಕ್ಕೆ ಕುಳಿತುಕೊಂಡಿದ್ದಾರೆ. ಸತ್ಯಾಗ್ರಹ ನಿರತವಾಗಿರುವಾಗಲೇ ರಾಜಕುಮಾರ್ ಗಣೇಶ್ ಅಸ್ವಸ್ಥರಾಗಿದ್ದಾರೆ. ನಸುಕಿನ ಜಾವದಿಂದಲೇ ರಾಜಕುಮಾರ್ ಏಕಾಂಗಿ ಹೋರಾಟ ಮಾಡುತ್ತಿದ್ದರು. ಈ ವೇಳೆ ನಿತ್ರಾಣಗೊಂಡು ಅಸ್ವಸ್ಥಗೊಂಡಿದ್ದಾರೆ. ಬಳಿಕ ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಲಂಚದ ಬೇಡಿಕೆಯಿಟ್ಟ ಟಿಕೆಟ್ ಇನ್ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
