ಪ್ರಾಸಿಕ್ಯೂಷನ್​ಗೆ ಅನುಮತಿ: ಉಪವಾಸ ಸತ್ಯಾಗ್ರಹ ನಿರತ ಸಿದ್ದರಾಮಯ್ಯ ಅಭಿಮಾನಿ ಅಸ್ವಸ್ಥ

Edited By:

Updated on: Aug 18, 2024 | 6:04 PM

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನಿನ್ನೆ ಅನುಮತಿ ಕೊಟ್ಟಿದ್ದೇ ತಡ ಕಾಂಗ್ರೆಸ್‌ ಕಾರ್ಯಕರ್ತರು, ಸಿದ್ದು ಅಭಿಮಾನಿಗಳು ನಿನ್ನೆಯೇ ರಸ್ತೆಗೆ ಇಳಿದಿದ್ರು. ಇವತ್ತು ಕೂಡಾ ರಾಜ್ಯದ ಉದ್ದಗಲಕ್ಕೂ ಹೋರಾಟ ಮುಂದುವರಿದಿತ್ತು. ಇತ್ತ ಯಾದಗಿರಿಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತ್ತಿದ್ದು, ಸತ್ಯಾಗ್ರಹದಲ್ಲಿ ನಿರತವಾಗಿರುವಾಗಲೇ ​ಅಸ್ವಸ್ಥಗೊಂಡಿರುವಂತಹ ಘಟನೆ ನಡೆದಿದೆ.

ಯಾದಗಿರಿ, ಆಗಸ್ಟ್​ 18: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ವಿಚಾರವಾಗಿ ಕರ್ನಾಟಕದಲ್ಲಿ ಎಲ್ಲೆಡೆ ಕಾಂಗ್ರೆಸ್​ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಇತ್ತ ನಗರದ ಸುಭಾಷ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕದ ಸಿದ್ದರಾಮಯ್ಯ (Siddaramaiah) ಅಭಿಮಾನಿ ಬ್ರಿಗೇಡ್ ರಾಜ್ಯಾಧ್ಯಕ್ಷ ರಾಜಕುಮಾರ್ ಗಣೇಶ್​​ರಿಂದ ಉಪವಾಸ ಸತ್ಯಾಗ್ರಹಕ್ಕೆ ಕುಳಿತುಕೊಂಡಿದ್ದಾರೆ. ಸತ್ಯಾಗ್ರಹ ನಿರತವಾಗಿರುವಾಗಲೇ ರಾಜಕುಮಾರ್ ಗಣೇಶ್​​​ ಅಸ್ವಸ್ಥರಾಗಿದ್ದಾರೆ. ನಸುಕಿನ ಜಾವದಿಂದಲೇ ರಾಜಕುಮಾರ್ ಏಕಾಂಗಿ ಹೋರಾಟ ಮಾಡುತ್ತಿದ್ದರು.​ ಈ ವೇಳೆ ನಿತ್ರಾಣಗೊಂಡು ಅಸ್ವಸ್ಥಗೊಂಡಿದ್ದಾರೆ. ಬಳಿಕ ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಮೀನ್​ ಸಾಬ್​

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More