ಯಾದಗಿರಿ, ಆಗಸ್ಟ್ 18: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರವಾಗಿ ಕರ್ನಾಟಕದಲ್ಲಿ ಎಲ್ಲೆಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಇತ್ತ ನಗರದ ಸುಭಾಷ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕದ ಸಿದ್ದರಾಮಯ್ಯ (Siddaramaiah) ಅಭಿಮಾನಿ ಬ್ರಿಗೇಡ್ ರಾಜ್ಯಾಧ್ಯಕ್ಷ ರಾಜಕುಮಾರ್ ಗಣೇಶ್ರಿಂದ ಉಪವಾಸ ಸತ್ಯಾಗ್ರಹಕ್ಕೆ ಕುಳಿತುಕೊಂಡಿದ್ದಾರೆ. ಸತ್ಯಾಗ್ರಹ ನಿರತವಾಗಿರುವಾಗಲೇ ರಾಜಕುಮಾರ್ ಗಣೇಶ್ ಅಸ್ವಸ್ಥರಾಗಿದ್ದಾರೆ. ನಸುಕಿನ ಜಾವದಿಂದಲೇ ರಾಜಕುಮಾರ್ ಏಕಾಂಗಿ ಹೋರಾಟ ಮಾಡುತ್ತಿದ್ದರು. ಈ ವೇಳೆ ನಿತ್ರಾಣಗೊಂಡು ಅಸ್ವಸ್ಥಗೊಂಡಿದ್ದಾರೆ. ಬಳಿಕ ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.