AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಯಕ್ತಿಕವಾಗಿ ನಿತಿನ್ ಗಡ್ಕರಿ ಕಾರ್ಯವೈಖರಿ ಮೆಚ್ಚುತ್ತೇನೆ, ಅವರು ತಾರತಮ್ಯವೆಸಗದ ರಾಜಕಾರಣಿ: ರಾಜಣ್ಣವೈಯಕ್ತಿಕವಾಗಿ ನಿತಿನ್ ಗಡ್ಕರಿ ಕಾರ್ಯವೈಖರಿ ಮೆಚ್ಚುತ್ತೇನೆ, ಅವರು ತಾರತಮ್ಯವೆಸಗದ ರಾಜಕಾರಣಿ: ರಾಜಣ್ಣ

ವೈಯಕ್ತಿಕವಾಗಿ ನಿತಿನ್ ಗಡ್ಕರಿ ಕಾರ್ಯವೈಖರಿ ಮೆಚ್ಚುತ್ತೇನೆ, ಅವರು ತಾರತಮ್ಯವೆಸಗದ ರಾಜಕಾರಣಿ: ರಾಜಣ್ಣ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 14, 2025 | 8:32 PM

Share

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಇತಿಮಿತಿಯಲ್ಲಿ ಕೆಲಸ ಮಾಡಬೇಕು, ಸಿಗಂದೂರು ಚೌಡೇಶ್ವರಿ ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿರದಿದ್ದರೆ ಅದು ಖಂಡನಾರ್ಹ, ಇಂಡಿಯಲ್ಲಿ ಪೂರ್ವನಿಯೋಜಿತ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಸೇತುವೆ ಉದ್ಘಾಟನಾ ಕಾರ್ಯಕ್ರಮವನ್ನು ಕೊಂಚ ಮುಂದೂಡುವಂತೆ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು ಎಂದು ರಾಜಣ್ಣ ಹೇಳಿದರು.

ಹಾಸನ, ಜುಲೈ 14: ಹಾಸನದಲ್ಲಿ ಕೆಡಿಪಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ (KN Rajanna) ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಹಾಡಿ ಹೊಗಳಿದರು. ಮೊದಲಾದರೋ ಅವರು ಪುಣೆಯವರು, ಆರ್​ಎಸ್ಎಸ್ ಹಿನ್ನೆಲೆಯವರು ಅಂತ ಅಂದುಕೊಳ್ಳುತ್ತಿದ್ದುದುಂಟು, ಆದರೆ ವಾಹಿನಿಯೊಂದಕ್ಕೆ ಅವರು ನೀಡಿದ ಸಂದರ್ಶನ ನೋಡಿದಾಗ ಮತ್ತು ಕಾರ್ಯವೈಖರಿಯನ್ನು ಗಮನಿಸಿದಾಗ ಅವರ ಬಗ್ಗೆ ತಳೆದಿದ್ದ ನಿಲುವು ಬದಲಾಯಿತು. ಅಭಿವೃದ್ಧಿ ವಿಷಯದಲ್ಲಿ ಅವರು ಯಾವತ್ತೂ ತಾರಾತಮ್ಯ ಮಾಡಿದವರಲ್ಲ, ಅಭಿವೃದ್ಧಿ ಪರ ನಿಲ್ಲುವ ರಾಜಕಾರಣಿ ಅನ್ನೋದು ಮನವರಿಕೆಯಾಯಿತು, ಇವತ್ತು ದೇಶದಲ್ಲಿ ಎಷ್ಟೋ ಕಡೆ ಅವರು ರಸ್ತೆಗಳನ್ನು ಮಾಡಿಸುತ್ತಿದ್ದಾರೆ, ಅವರ ಬಗ್ಗೆ ಅಪಾರವಾದ ಗೌರವವಿದೆ ಎಂದು ರಾಜಣ್ಣ ಹೇಳಿದರು.

ಇದನ್ನೂ ಓದಿ:   ಭಾರತದಲ್ಲಿ ಇನ್ನೂ 25 ಹಸಿರು ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ; ನಿತಿನ್ ಗಡ್ಕರಿ

ವಿಡಿಯೋ ಸುದ್ದಿಗಳಿಗಾಗು ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.