ಬಿಡದಿ ಬಳಿ ದಿವ್ಯಾಂಗ ಅಪ್ರಾಪ್ತೆಯೊಬ್ಬಳ ಅಸಹಜ ಸಾವು, ಕೊಲೆ ಎನ್ನುತ್ತಿರುವ ಕುಟುಂಬ, ಸಂಸದ ಮಂಜುನಾಥ್ ಭೇಟಿ

Updated on: May 15, 2025 | 5:38 PM

ಭಧ್ರಾಪುರ ಗ್ರಾಮಕ್ಕೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದ ಸಂಸದ ಡಾ ಮಂಜುನಾಥ್, ವಿದ್ಯುತ್ ಸರಬರಾಜು ಪದೇಪದೆ ವ್ಯತ್ಯಯಗೊಳ್ಳುವ ಸಮಸ್ಯೆ ಇದೆ, ಅದರ ಪರಿಹಾರಕ್ಕಾಗಿ ಸೌರಶಕ್ತಿಯ ಮೂಲಕ ವಿದ್ಯುತ್ ಒದಗಿಸುವ ಕೆಲಸ ತಾನು ಮಡೋದಾಗಿ ಹೇಳಿದರು. ಮಂಜುನಾಥ್ ಅವರು ಕುಟುಂಬಸ್ಥರು ಮತ್ತು ಸಂಬಂಧಿಕರ ಮಾತುಗಳನ್ನು ಆಲಿಸಿದರು.

ರಾಮನಗರ, ಮೇ 15: ಜಿಲ್ಲೆಯ ಬಿಡದಿ ಬಳಿಯಿರುವ ಭದ್ರಾಪುರ ಗ್ರಾಮದಲ್ಲಿ ಒಂದು ಅನಾಥ ದಿವ್ಯಾಂಗ ಮಗುವಿನ ಶವ ರೇಲ್ವೇ ಟ್ರ್ಯಾಕ್ ಬಳಿ ಸಿಕ್ಕಿದೆ. ಸಂಬಂಧಿಕರು ಮಗುವಿನ ಕೊಲೆ ಮಾಡಲಾಗಿದೆ ಎನ್ನುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಸಂಸದ ಡಾ ಸಿಎನ್ ಮಂಜುನಾಥ್ ಅವರು, ಮಗೂಗೆ ತಂದೆ ಇಲ್ಲ, ಈ ಕುಟುಂಬದ ಮೂರು ಮಕ್ಕಳು ಹುಟ್ಟು ಕಿವುಡುತನದಿಂದ ಬಳಲುತ್ತಿವೆ, ಮಗುವಿನ ದೇಹದ ಪೊಸ್ಟ್​ಮಾರ್ಟಂ ನಡೆಸಿ ಅದನ್ನು ಎಫ್​ಎಸ್ಎಲ್ ಗೆ ಕಳಿಸಲಾಗಿದೆ, ಅಲ್ಲಿಂದ ರಿಪೋರ್ಟ್ ಬಂದ ನಂತರವೇ ಸಾವಿನ ಕಾರಣ ಗೊತ್ತಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ:   ನಾಲಗೆಗೆ ಆದ ಗಾಯ ಮಾಯುತ್ತೆ ನಾಲಗೆಯಿಂದಾದ ಗಾಯ ಮಾಯಲಾರದು: ಡಾ ಸಿಎನ್ ಮಂಜುನಾಥ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More