ಕೆಜಿಎಫ್ ಚಿನ್ನದ ಗಣಿಗೆ ಬಿಬಿಎಂಪಿ ಕಸ! 300 ಎಕರೆ ಜಾಗ ಗುರುತು ಮಾಡಿದ ಕೋಲಾರ ಜಿಲ್ಲಾಡಳಿತ

Edited By:

Updated on: Aug 23, 2024 | 1:09 PM

ಬೆಂಗಳೂರು ನಗರದ ಕಸವನ್ನು ಕೋಲಾರದ ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ವಿಲೇವಾರಿ ಮಾಡುವ ಬಗ್ಗೆ ಹಿಂದೊಮ್ಮೆ ಚರ್ಚೆ ನಡೆದು, ವಿರೋಧ ವ್ಯಕ್ತವಾಗಿತ್ತು. ಇದೀಗ ಸರ್ಕಾರ ಮತ್ತೆ ಆ ಸಾಹಸಕ್ಕೆ ಕೈಹಾಕಲು ಮುಂದಾಗಿದೆ. ಈ ಕುರಿತು ‘ಟಿವಿ9’ ಕೋಲಾರ ವರದಿಗಾರ ರಾಜೇಂದ್ರ ಸಿಂಹ ನೀಡಿರುವ ವಿಸ್ತೃತ ವರದಿ ಇಲ್ಲಿದೆ ನೋಡಿ.

ಕೋಲಾರ, ಆಗಸ್ಟ್ 23: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಸವನ್ನು ಕೋಲಾರದ ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ವಿಲೇವಾರಿ ಮಾಡಲು ಮತ್ತೆ ಯೋಜನೆ ರೂಪಿಸಲಾಗುತ್ತಿದೆ. ಕೋಲಾರ ಜಿಲ್ಲಾಡಳಿತವು ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಕೆಜಿಎಫ್​ ತಾಲ್ಲೂಕಿನಲ್ಲಿ 300 ಎಕರೆ ಜಾಗ ಗುರುತು ಮಾಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಸೂಚನೆ ಮೇರೆಗೆ ಜಾಗ ಗುರುತು ಮಾಡಲಾಗಿದೆ.

ಹೊಸದಾಗಿ ನಿರ್ಮಾಣವಾಗಿರುವ ಚೆನೈ – ಬೆಂಗಳೂರು ಎಕ್ಸ್​ಪ್ರೆಸ್​​​ ಕಾರಿಡಾರ್​ ಹೆದ್ದಾರಿ ಮೂಲಕ ತೆರಳಿ ಬಿಬಿಎಂಪಿ ಕಸವನ್ನು ವಿಲೇವಾರಿ ಮಾಡಲು ಉದ್ದೇಶಿಸಲಾಗಿದೆ. 100 ಎಕರೆ ಪ್ರದೇಶದಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ಘಟಕ ನಿರ್ಮಾಣ ಮಾಡಲಾಗುತ್ತದೆ ಎನ್ನಲಾಗಿದೆ.

200 ಎಕರೆ ಪ್ರದೇಶದಲ್ಲಿ ದಟ್ಟವಾದ ಕಾಡು ಬೆಳೆಸಿ ಬಯೋ ಪೆನ್ಸಿಂಗ್​ ಮಾಡಲಾಗುತ್ತದೆ. ಆ ಮೂಲಕ ಪರಿಸರಕ್ಕೆ ಹಾನಿಯಾಗದಂತೆ ಯೋಜನೆ ರೂಪಿಸಲಾಗುತ್ತಿದೆ. ಸದ್ಯ ಕಸ ವಿಲೇವಾರಿ ಘಟಕ ನಿರ್ಮಾಣ ವಿಚಾರ ಪ್ರಾಥಮಿಕ ಹಂತದಲ್ಲಿ ಚರ್ಚೆಯಲ್ಲಿದೆ.

ಇದನ್ನೂ ಓದಿ: ಕೋಲಾರ: ವೀಲಿಂಗ್ ಪುಂಡರ ಹುಚ್ಚಾಟಕ್ಕೆ ಅರ್ಚಕ ಬಲಿ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಈ ಹಿಂದೆ 2015 ರಲ್ಲಿ ಕೂಡಾ ಕೆಜಿಎಫ್​ನ ಚಿನ್ನದ ಗಣಿ ಗುಂಡಿಯಲ್ಲಿ ಕಸ ಸುರಿಯುವ ಯೋಜನೆ ರೂಪಿಸಲಾಗಿತ್ತು. ಆದರೆ, ಆಗ ಕೆಜಿಎಫ್​ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ನಂತರ ಆ ಪ್ರಸ್ತಾಪವನ್ನು ಕೈಬಿಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More