‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಹಳೆಯ ದಿನಗಳನ್ನು ನೆನಪಿಸಿಕೊಂಡ ಸಂಜಿತ್ ಹೆಗಡೆ
ನಾನಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 9 ವ್ಯಕ್ತಿಗಳಿಗೆ ಸನ್ಮಾನ ಮಾಡುವ ಕಾರ್ಯ ನಡೆದಿದೆ. ರಶ್ಮಿಕಾ ಮಂದಣ್ಣ, ಶಿವರಾಜ್ಕುಮಾರ್ ಮೊದಲಾದವರಿಗೆ ಸನ್ಮಾನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ರವಿಚಂದ್ರನ್ ಮೊದಲಾದವರು ಆಗಮಿಸಿದ್ದರು.
ಗಾಯಕ ಸಂಜಿತ್ ಹೆಗಡೆಗೆ ಹೆಚ್ಚು ಬೇಡಿಕೆ ಇದೆ. ಅವರು ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ‘ಟಿವಿ9 ಬಗ್ಗೆ ಖುಷಿ ಇದೆ. ನವ ನಕ್ಷತ್ರದಲ್ಲಿ ಸಂಗೀತ ಕ್ಷೇತ್ರದಿಂದ ನನ್ನನ್ನು ಆಯ್ಕೆ ಮಾಡಿದ್ದೀರಿ. ನಾನು ಸಣ್ಣ ಆರ್ಟಿಸ್ಟ್. ಆದಾಗ್ಯೂ ನೀವು ನನ್ನನ್ನು ಕರೆದಿದ್ದೀರಿ. ಸನ್ಮಾನ ಮಾಡಿದ್ದೀರಿ. ಟಿವಿ9 ಕನ್ನಡಕ್ಕೆ ನಾನು ಥ್ಯಾಂಕ್ಸ್ ಹೇಳಬೇಕು’ ಎಂದರು ಸಂಜಿತ್. ಈ ವೇಳೆ ಅವರು ತಮ್ಮ ಸಂಗೀತ ಲೋಕದ ಜರ್ನಿ ಹೇಗಿತ್ತು, ಅದು ಆರಂಭವಾಗಿದ್ದು ಹೇಗೆ ಎನ್ನುವ ಬಗ್ಗೆಯೂ ಮೆಲುಕು ಹಾಕಿದರು. ಟಿವಿ9 ಕನ್ನಡ ‘ನವನಕ್ಷತ್ರ ಸನ್ಮಾನ 2021’ ಕಾರ್ಯಕ್ರಮ ಹಮ್ಮಿಕೊಂಡಿತ್ತು. ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿದ 9 ವ್ಯಕ್ತಿಗಳಿಗೆ ಸನ್ಮಾನ ಮಾಡುವ ಕಾರ್ಯ ನಡೆದಿದೆ. ರಶ್ಮಿಕಾ ಮಂದಣ್ಣ ಮೊದಲಾದವರಿಗೆ ಸನ್ಮಾನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ರವಿಚಂದ್ರನ್ ಮೊದಲಾದವರು ಆಗಮಿಸಿದ್ದರು. ಈ ವೇಳೆ ಅವರು ಟಿವಿ9 ಕನ್ನಡದ ಕಾರ್ಯದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.
ಇದನ್ನೂ ಓದಿ: ‘ಒಳ್ಳೆಯ ಕೆಲಸಕ್ಕೆ ಇದು ಸ್ಫೂರ್ತಿ’; ನವನಕ್ಷತ್ರ ಸನ್ಮಾನ ಕುರಿತು ರಘು ದೀಕ್ಷಿತ್ ಮಾತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!

