ಪಿಎಂ ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿಗಳೇ ಗಮನಿಸಿ: ಇ-ಕೆವೈಸಿಗೆ ಸೆ. 30 ಡೆಡ್​​ಲೈನ್​​

Edited By:

Updated on: Sep 16, 2026 | 4:00 PM

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳು ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇಲ್ಲವಾದಲ್ಲಿ ಮುಂದಿನ 2,000 ಕಂತು ಸಿಗುವುದಿಲ್ಲ. ರಾಜ್ಯದಲ್ಲಿ ಸುಮಾರು 47 ಲಕ್ಷ ರೈತರು ಇ-ಕೆವೈಸಿ ಮಾಡಿಸುವುದು ಬಾಕಿಯಿದೆ. ಅಕ್ರಮಗಳನ್ನು ತಡೆಯಲು ಫೇಸ್ ಅಥೆಂಟಿಕೇಷನ್ ಅಥವಾ ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಸಬಹುದಾಗಿದೆ.

ಬೆಂಗಳೂರು, ಸೆಪ್ಟೆಂಬರ್​​ 16: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಪ್ರಮುಖ ಸೂಚನೆ ನೀಡಲಾಗಿದೆ. ಯೋಜನೆಯ ಮುಂದಿನ ಕಂತಿನ ಹಣ ಪಡೆಯಲು ಸೆಪ್ಟೆಂಬರ್ 30, 2023ರೊಳಗೆ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಕೇಂದ್ರ ಕೃಷಿ ಸಚಿವಾಲಯ ಮತ್ತು ರಾಜ್ಯ ಕೃಷಿ ಇಲಾಖೆ ತಿಳಿಸಿದೆ. ನಿಗದಿತ ಗಡುವಿನೊಳಗೆ ಇ-ಕೆವೈಸಿ ಮಾಡಿಸದಿದ್ದರೆ, ಫಲಾನುಭವಿಗಳಿಗೆ ಬರಬೇಕಾದ ಮುಂದಿನ 2,000 ಕಂತಿನ ಹಣ ಸ್ಥಗಿತಗೊಳ್ಳಲಿದೆ. ರಾಜ್ಯದಲ್ಲಿ ಪ್ರಸ್ತುತ 47 ಲಕ್ಷಕ್ಕೂ ಹೆಚ್ಚು ರೈತರು ಇನ್ನೂ ಇ-ಕೆವೈಸಿ ಮಾಡಿಸಿಲ್ಲ ಎಂದು ಅಂದಾಜಿಸಲಾಗಿದೆ. ಹಿಂದೆ ಓಟಿಪಿ ಆಧಾರಿತ ಕೆವೈಸಿ ವಿಧಾನದಲ್ಲಿ ಅಕ್ರಮಗಳು ನಡೆಯುತ್ತಿದ್ದವು. ಮರಣ ಹೊಂದಿದ ಅಥವಾ ಜಮೀನು ಮಾರಾಟ ಮಾಡಿದವರ ಖಾತೆಗೂ ಹಣ ಹೋಗುತ್ತಿದ್ದ ನಿದರ್ಶನಗಳಿವೆ. ಇದನ್ನು ತಪ್ಪಿಸಲು, ಈಗ ಫೇಸ್ ಅಥೆಂಟಿಕೇಷನ್ ಅಥವಾ ಬಯೋಮೆಟ್ರಿಕ್ ವಿಧಾನಗಳ ಮೂಲಕ ಇ-ಕೆವೈಸಿ ಮಾಡಿಸಬೇಕಾಗಿದೆ. ರೈತರು ಪಿಎಂ ಕಿಸಾನ್ ಅಪ್ಲಿಕೇಶನ್ ಬಳಸಿ ಫೇಸ್ ಅಥೆಂಟಿಕೇಷನ್ ಮೂಲಕ ಅಥವಾ ಗ್ರಾಮ ಒನ್/ಸಿಇ ಸೆಂಟರ್‌ಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us