PM Kisan Yojana: ಕೇಂದ್ರ ಸರ್ಕಾರದಿಂದ 14ನೇ ಕಂತಿನ ಹಣ ಬಿಡುಗಡೆಗೆ ಮುನ್ನ ರೈತರು ಮಾಡಬೇಕಾದ ಕೆಲಸಗಳಿವು

Updated on: Apr 20, 2023 | 4:37 PM

ಕೇಂದ್ರ ಸರ್ಕಾರ ಈವರೆಗೂ 2,000 ರೂಗಳ 13 ಕಂತುಗಳನ್ನು ಬಿಡುಗಡೆ ಮಾಡಿದೆ. ಪ್ರತೀ 4 ತಿಂಗಳಿಗೊಮ್ಮೆ 2,000 ರೂ ಹಣವನ್ನು ಕೇಂದ್ರ ಸರ್ಕಾರ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸುತ್ತದೆ. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಈವರೆಗೂ 12 ಕೋಟಿಯಷ್ಟು ರೈತರು ನೊಂದಾವಣಿ ಮಾಡಿಕೊಂಡಿದ್ದಾರೆ.

ರೈತರಲ್ಲಿ ಬಹಳ ಜನಪ್ರಿಯವಾಗಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಈವರೆಗೂ 2,000 ರೂಗಳ 13 ಕಂತುಗಳನ್ನು ಬಿಡುಗಡೆ ಮಾಡಿದೆ. ಪ್ರತೀ 4 ತಿಂಗಳಿಗೊಮ್ಮೆ 2,000 ರೂ ಹಣವನ್ನು ಕೇಂದ್ರ ಸರ್ಕಾರ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸುತ್ತದೆ. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಈವರೆಗೂ 12 ಕೋಟಿಯಷ್ಟು ರೈತರು ನೊಂದಾವಣಿ ಮಾಡಿಕೊಂಡಿದ್ದಾರೆ. ಕಳೆದ ಬಾರಿ 8 ಕೋಟಿಗಿಂತಲೂ ಹೆಚ್ಚು ಮಂದಿಗೆ 13ನೇ ಕಂತಿನ ಹಣ ಸಿಕ್ಕಿದೆ. ಇದೀಗ ಈ ಯೋಜನೆಯ 14ನೇ ಕಂತಿನ ಹಣ ಬಿಡುಗಡೆ ಕುರಿತು ಚರ್ಚೆ ನಡೆಯುತ್ತಿದೆ. ಸರಿಯಾದ ದಾಖಲೆ ಅಪ್​ಡೇಟ್ ಮಾಡದಿರುವುದು ಸೇರಿದಂತೆ ಕೆಲವು ಕಾರಣಗಳಿಗೆ ಹಲವು ಮಂದಿಗೆ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಆಗದೇ ಇರಬಹುದು. ಈ ಹಿನ್ನೆಲೆಯಲ್ಲಿ ಪ್ರಯೋಜನಕ್ಕೆ ಬರುವ ಕೆಲವೊಂದಿಷ್ಟು ಮಾಹಿತಿ ಇಲ್ಲಿದೆ. ಇವುಗಳನ್ನು ಸರಿಯಾಗಿ ಗಮನಿಸಿದರೆ, ಯೋಜನೆಯ ಸೂಕ್ತ ಪ್ರಯೋಜನ ಪಡೆಯಬಹುದು.

Follow Us
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.

Read More