ಪಾಕಿಸ್ತಾನದ ಮೇಲಿನ ದಾಳಿ ಬೆನ್ನಲ್ಲೇ ಉನ್ನತ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಭಾರತ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ವೇಳೆ ರಾಷ್ಟ್ರೀಯ ಸನ್ನದ್ಧತೆ ಮತ್ತು ವಿವಿಧ ಸಚಿವಾಲಯಗಳ ನಡುವಿನ ಸಮನ್ವಯವನ್ನು ಪರಿಶೀಲಿಸಿದರು. ತುರ್ತು ಪ್ರತಿಕ್ರಿಯೆ, ಸಿದ್ಧತೆ ಮತ್ತು ಆಂತರಿಕ ಸಂವಹನ ಕಾರ್ಯವಿಧಾನಗಳಿಗೆ ಒತ್ತು ನೀಡುವ ಮೂಲಕ ತಮ್ಮ ಸಚಿವಾಲಯಗಳ ಕಾರ್ಯಾಚರಣೆಗಳ ಸಂಪೂರ್ಣ ಮೌಲ್ಯಮಾಪನವನ್ನು ನಡೆಸಲು ಪ್ರಧಾನಿ ಮೋದಿ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ನವದೆಹಲಿ, ಮೇ 8: ಮತ್ತೊಮ್ಮೆ ಪಾಕಿಸ್ತಾನದ (Pakistan) ಮೇಲೆ ಭಾರತ ದಾಳಿ ನಡೆಸಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಭಾರತ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಈ ವೇಳೆ ರಾಷ್ಟ್ರೀಯ ಸನ್ನದ್ಧತೆ ಮತ್ತು ವಿವಿಧ ಸಚಿವಾಲಯಗಳ ನಡುವಿನ ಸಮನ್ವಯವನ್ನು ಪರಿಶೀಲಿಸಿದರು. ತುರ್ತು ಪ್ರತಿಕ್ರಿಯೆ, ಸಿದ್ಧತೆ ಮತ್ತು ಆಂತರಿಕ ಸಂವಹನ ಕಾರ್ಯವಿಧಾನಗಳಿಗೆ ಒತ್ತು ನೀಡುವ ಮೂಲಕ ತಮ್ಮ ಸಚಿವಾಲಯಗಳ ಕಾರ್ಯಾಚರಣೆಗಳ ಸಂಪೂರ್ಣ ಮೌಲ್ಯಮಾಪನವನ್ನು ನಡೆಸಲು ಪ್ರಧಾನಿ ಮೋದಿ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಭಾರತದ ಆಪರೇಷನ್ ಸಿಂಧೂರದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾನಾಡಿದ್ದು, ಎಲ್ಲ ಸಚಿವಾಲಯಗಳೂ ಸಮನ್ವಯತೆಯ ಮೂಲಕ ಕಾರ್ಯ ನಿರ್ವಹಿಸಲು ಸೂಚಿಸಿದ್ದಾರೆ. ನಾಗರಿಕ ರಕ್ಷಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು, ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳನ್ನು ಎದುರಿಸುವ ಪ್ರಯತ್ನಗಳು ಮತ್ತು ಮೂಲಸೌಕರ್ಯಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಸಭೆಯಲ್ಲಿ ಚರ್ಚಿಸಲಾದ ಮುಖ್ಯ ವಿಷಯಗಳಾಗಿವೆ. ಈ ಸಭೆಯಲ್ಲಿ ಪ್ರಧಾನ ಮಂತ್ರಿ ಕಚೇರಿಯ ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ, ರಕ್ಷಣಾ, ಗೃಹ ವ್ಯವಹಾರಗಳು, ವಿದೇಶಾಂಗ ವ್ಯವಹಾರಗಳು, ಮಾಹಿತಿ ಮತ್ತು ಪ್ರಸಾರ, ವಿದ್ಯುತ್, ಆರೋಗ್ಯ ಮತ್ತು ದೂರಸಂಪರ್ಕ ಸಚಿವಾಲಯಗಳ ಕಾರ್ಯದರ್ಶಿಗಳು ಹಾಜರಿದ್ದರು.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ