AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟೂರು ಹೆಚ್ ಎ ಎಲ್ ಘಟಕದಲ್ಲಿ 2018ರಲ್ಲೇ ಹೆಲಿಕಾಪ್ಟರ್ ತಯಾರಾಗಲಿದೆ ಅಂತ ಪ್ರಧಾನಿ ಮೋದಿ ಹೇಳಿದ್ದರು: ಜಿ ಪರಮೇಶ್ವರ್

ನಿಟ್ಟೂರು ಹೆಚ್ ಎ ಎಲ್ ಘಟಕದಲ್ಲಿ 2018ರಲ್ಲೇ ಹೆಲಿಕಾಪ್ಟರ್ ತಯಾರಾಗಲಿದೆ ಅಂತ ಪ್ರಧಾನಿ ಮೋದಿ ಹೇಳಿದ್ದರು: ಜಿ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 07, 2023 | 6:17 PM

Share

ಅವತ್ತಿನ ಭಾಷಣದಲ್ಲಿ ಪ್ರಧಾನಿ ಮೋದಿ ಅವರು, 2018 ರಲ್ಲೇ ಈ ಕಾರ್ಖಾನೆಯಲ್ಲಿ ತಯಾರಾಗುವ ಮೊದಲ ಹೆಲಿಕಾಪ್ಟರ್ ಹಾರಿಸುತ್ತೇವೆ ಅಂತ ಅವರು ಹೇಳಿದ್ದರು. ಆದರೆ 2023ರಲ್ಲಿ ಅದು ಸಾಧ್ಯವಾಗಿದೆ ಎಂದು ಪರಮೇಶ್ವರ್ ಹೇಳಿದರು.

ತುಮಕೂರು: ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಡಿ ಪರಮೇಶ್ವರ್ (D Parameshwar) ಅವರು ಸೋಮವಾರದಂದು ನಿಟ್ಟೂರಲ್ಲಿ ಹೆಚ್ ಎ ಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಲೋಕಾರ್ಪಣೆ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಅಭಿನಂದಿಸಿ ಧನ್ಯವಾದಗಳನ್ನು ಹೇಳಿದರು. ಆದರೆ ಕಾರ್ಖಾನೆ ನಿರ್ಮಾಣ ಕಾರ್ಯ ಬಹಳ ತ್ವರಿತ ಗತಿಯಲ್ಲಿ ಪೂರ್ಣಗೊಂಡು ಹೆಲಿಕಾಪ್ಟರ್ (helicopter) ತಯಾರಿಕೆ ಕೆಲಸ ಶುರುವಾಗಿದೆ ಎಂದು ಬಿಜೆಪಿಯವರು ಹೇಳುತ್ತಿರುವುದಕ್ಕೆ ಪರಮೇಶ್ವರ್ ಕಾಲೆಳೆದರು. 2016ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರಧಾನಿಯವರು ಶಂಕುಸ್ಥಾಪನೆ ನೆರವೇರಿಸಿದ್ದರು ಮತ್ತು ಅವತ್ತಿನ ಭಾಷಣದಲ್ಲಿ ಅವರು, 2018 ರಲ್ಲೇ ಈ ಕಾರ್ಖಾನೆಯಲ್ಲಿ ತಯಾರಾಗುವ ಮೊದಲ ಹೆಲಿಕಾಪ್ಟರ್ ಹಾರಿಸುತ್ತೇವೆ ಅಂತ ಅವರು ಹೇಳಿದ್ದರು. ಆದರೆ 2023ರಲ್ಲಿ ಅದು ಸಾಧ್ಯವಾಗಿದೆ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 07, 2023 06:14 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.