ಆರ್​ಜೆಡಿ, ಕಾಂಗ್ರೆಸ್​ ಸೃಷ್ಟಿಸಿದ್ದ ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ

Updated on: Jun 20, 2025 | 2:17 PM

ಬಿಹಾರದಲ್ಲಿ ಕಾಂಗ್ರೆಸ್​ ಹಾಗೂ ಆರ್​ಜೆಡಿ ಸೃಷ್ಟಿಸಿದ್ದ ಜಂಗಲ್​​ರಾಜ್​ಗೆ ಜನತೆ ಅಂತ್ಯ ಹಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಹಾರದ ಸಿವಾನ್​ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್​ ಹಾಗೂ ಆರ್​ಜೆಡಿ ರಾಜ್ಯವನ್ನು ಕಾನೂನುಬಾಹಿರತೆ, ಬಡತನ ಹಾಗೂ ಸಾಮೂಹಿಕ ವಲಸೆಯಿಂದ ಕೂಡಿದ ಜಂಗಲ್​​ರಾಜ್​ಗೆ ತಳ್ಳಿತ್ತು. ಆ ಕರಾಳ ಅಧ್ಯಾಯವನ್ನು ಕೊನೆಗೊಳಿಸಿದ್ದಕ್ಕಾಗಿ ಬಿಹಾರದ ಜನತೆಗೆ ಕೃತಜ್ಞತೆ ಸಲ್ಲಿಸಿದರು.

ಪಾಟ್ನಾ, ಜೂನ್ 20: ಬಿಹಾರದಲ್ಲಿ ಕಾಂಗ್ರೆಸ್​ ಹಾಗೂ ಆರ್​ಜೆಡಿ ಸೃಷ್ಟಿಸಿದ್ದ ಜಂಗಲ್​​ರಾಜ್​ಗೆ ಜನತೆ ಅಂತ್ಯ ಹಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಹಾರದ ಸಿವಾನ್​ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್​ ಹಾಗೂ ಆರ್​ಜೆಡಿ ರಾಜ್ಯವನ್ನು ಕಾನೂನುಬಾಹಿರತೆ, ಬಡತನ ಹಾಗೂ ಸಾಮೂಹಿಕ ವಲಸೆಯಿಂದ ಕೂಡಿದ ಜಂಗಲ್​​ರಾಜ್​ಗೆ ತಳ್ಳಿತ್ತು. ಆ ಕರಾಳ ಅಧ್ಯಾಯವನ್ನು ಕೊನೆಗೊಳಿಸಿದ್ದಕ್ಕಾಗಿ ಬಿಹಾರದ ಜನತೆಗೆ ಕೃತಜ್ಞತೆ ಸಲ್ಲಿಸಿದರು.

ಆರ್‌ಜೆಡಿ-ಕಾಂಗ್ರೆಸ್ ಅಭಿವೃದ್ಧಿ ವಿರೋಧಿ, ಹೂಡಿಕೆ ವಿರೋಧಿ, ಗೂಂಡಾಗಿರಿ ಭ್ರಷ್ಟಚಾರ ಮಾಡಿಕೊಂಡೇ ಬಂದಿದ್ದಾರೆ. ಎನ್‌ಡಿಎ ಯಾವ ರೀತಿಯ ಬಿಹಾರವನ್ನು ನಿರ್ಮಿಸುತ್ತಿದೆ ಎಂಬುದನ್ನು ಸಾರ್ವಜನಿಕರು ನೋಡುತ್ತಿದ್ದಾರೆ. ಬಿಹಾರದಲ್ಲಿ ದೊಡ್ಡ ಮೇಡ್ ಇನ್ ಇಂಡಿಯಾ ಕೇಂದ್ರವನ್ನು ನಿರ್ಮಿಸಲಾಗುವುದು. ಬಿಹಾರದ ಸರಕುಗಳನ್ನು ರಫ್ತು ಮಾಡಲಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More