ಪಿಎಂ ಕುಸುಮ್ ಯೋಜನೆಯ ಫಲಾನುಭವಿಗಳ ಜೊತೆ ಪ್ರಧಾನಿ ಮೋದಿ ಸಂವಾದ

Updated on: Sep 25, 2025 | 5:53 PM

ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಭಾರತದ ಶುದ್ಧ ಇಂಧನ ಜವಾಬ್ದಾರಿಯನ್ನು ಒತ್ತಿ ಹೇಳಿದ ಮೋದಿ, ಪ್ರಧಾನಿ ಸೂರ್ಯಘರ್ ಉಚಿತ ವಿದ್ಯುತ್, ಮನೆ ಮತ್ತು ತೋಟಗಳಿಗೆ ಉಚಿತ ಸೌರಶಕ್ತಿ ಒದಗಿಸುವ ಪಿಎಂ-ಕುಸುಮ್ ಯೋಜನೆಗಳನ್ನು ಎತ್ತಿ ತೋರಿಸಿದರು. ಇದು ಲಕ್ಷಾಂತರ ರೈತರಿಗೆ ಪ್ರಯೋಜನವನ್ನು ನೀಡಿತು ಎಂದಿದ್ದಾರೆ.

ಬರ್ಮೆರ್, ಸೆಪ್ಟೆಂಬರ್ 25: ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಕರ್ನಾಟಕದಲ್ಲಿ ಪಿಎಂ-ಕುಸುಮ್ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ್ ಮಹಾಭಿಯಾನ್) ಯೋಜನೆಯ ಅಡಿಯಲ್ಲಿ 16,050 ಕೋಟಿ ರೂ.ಗೂ ಹೆಚ್ಚು ಮೌಲ್ಯದ 3,517 ಮೆಗಾವ್ಯಾಟ್ ಫೀಡರ್ ಮಟ್ಟದ ಸೌರೀಕರಣ ಯೋಜನೆಗಳನ್ನು ಉದ್ಘಾಟಿಸಿದರು. ವಿದ್ಯುತ್ ವೆಚ್ಚವನ್ನು ಕಡಿಮೆ ಮಾಡುವುದು, ನೀರಾವರಿ ವೆಚ್ಚವನ್ನು ಕಡಿತಗೊಳಿಸುವುದು ಮತ್ತು ಗ್ರಾಮೀಣ ಇಂಧನ ಸ್ವಾವಲಂಬನೆಯನ್ನು ಉತ್ತೇಜಿಸುವ ಮೂಲಕ ಲಕ್ಷಾಂತರ ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ಇಂದು ಪಿಎಂ ಕುಸುಮ್ ಯೋಜನೆಯ ಫಲಾನುಭವಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದಾರೆ.

ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಭಾರತದ ಶುದ್ಧ ಇಂಧನ ಜವಾಬ್ದಾರಿಯನ್ನು ಒತ್ತಿ ಹೇಳಿದ ಮೋದಿ, ಪ್ರಧಾನಿ ಸೂರ್ಯಘರ್ ಉಚಿತ ವಿದ್ಯುತ್, ಮನೆ ಮತ್ತು ತೋಟಗಳಿಗೆ ಉಚಿತ ಸೌರಶಕ್ತಿ ಒದಗಿಸುವ ಪಿಎಂ-ಕುಸುಮ್ ಯೋಜನೆಗಳನ್ನು ಎತ್ತಿ ತೋರಿಸಿದರು. ಇದು ಲಕ್ಷಾಂತರ ರೈತರಿಗೆ ಪ್ರಯೋಜನವನ್ನು ನೀಡಿತು ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ