ಸಿಎಂ ಬಂದು ಎಲ್ಲರಿಗೂ ಒಂದೊಂದು ಲಕ್ಷ ಕೊಟ್ಟರು: ದಿ ಎಲಿಫೆಂಟ್​​ ವಿಸ್ಪರರ್ಸ್ ಖ್ಯಾತಿಯ ಬೊಮ್ಮ

Updated on: Apr 10, 2023 | 3:04 PM

ತಮಿಳುನಾಡಿನ ಮುದುಮಲೈ ಅರಣ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಈ ವೇಳೆ ತೆಪ್ಪಕಾಡು ಆನೆ ಶಿಬಿರದಲ್ಲಿ ದಿ ಎಲಿಫೆಂಟ್​​ ವಿಸ್ಪರರ್ಸ್ ಖ್ಯಾತಿಯ ಬೆಳ್ಳಿ, ಬೊಮ್ಮ​ ದಂಪತಿ ಭೇಟಿಯಾಗಿ ಸನ್ಮಾನಿಸಿದರು.

ತಮಿಳುನಾಡಿನ ಮುದುಮಲೈ ಅರಣ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡಿದ್ದಾರೆ. ಈ ವೇಳೆ ತೆಪ್ಪಕಾಡು ಆನೆ ಶಿಬಿರದಲ್ಲಿ ದಿ ಎಲಿಫೆಂಟ್​​ ವಿಸ್ಪರರ್ಸ್ (The Elephant Whisperers)​ ಖ್ಯಾತಿಯ ಬೆಳ್ಳಿ, ಬೊಮ್ಮ​ ದಂಪತಿ ಭೇಟಿಯಾಗಿ ಸನ್ಮಾನಿಸಿದರು. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಮದುಮಲೈನಲ್ಲಿ ಕಾವಾಡಿಗ ಬೊಮ್ಮಣ್ಣ, ಪ್ರಧಾನಿಯವರನ್ನ ನೋಡಿ ಮನಸ್ಸಿಗೆ ತುಂಬಾ ಖುಷಿ ತಂದಿದೆ. ನಮ್ಮನ್ನ ದೆಹಲಿಯ ನಿವಾಸಕ್ಕೆ ಬರಲು ತಿಳಿಸಿದ್ದಾರೆ. ನಾವು ಸಹ ಬರುತ್ತೇವೆ ಎಂದು ತಿಳಿಸಿದ್ದೇವೆ. ನಮ್ಮ ಕಾವಾಡಿಗರ ಕುರಿತು ಮೋದಿಯವರಿಗೆ ಇರೋ ಅಭಿಮಾನ ಕಂಡು ಸಂತಸ ಆಗುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿಯವರು ನಮ್ಮ ಬಳಿ ಬಂದಿರುವುದು ಅತ್ಯಂತ ಸಂತೋಷವಾಗಿದೆ. ಇದನ್ನು ನಾವು ಕನಸಿನಲ್ಲೂ ಯೋಚಿಸಿರಲಿಲ್ಲ. ಸಂತೋಷದಿಂದ ಕುಳಿತುಕೊಂಡು ಮಾತನಾಡಿದರು ಎಂದರು. ಅಲ್ಲದೆ, ಮುಖ್ಯಮಂತ್ರಿಯವರು ಎಲ್ಲಾ ಕಾವಾಡಿಗಳಿಗೆ ಒಂದೊಂದು ಲಕ್ಷ ಹಣ ಕೊಟ್ಟಿದ್ದಾರೆ ಎಂದರು.

ಇದನ್ನೂ ಓದಿ: ‘ಬೊಮ್ಮನ್​-ಬೆಳ್ಳಿ ಮತ್ತು ರಾಘು ಜೊತೆ ಆಹಾ ಎಂಥ ಭೇಟಿ’; ಖುಷಿ ಹಂಚಿಕೊಂಡ ನರೇಂದ್ರ ಮೋದಿ

ಮತ್ತಷ್ಟು ವಿಡಿಯೋ ಸ್ಟೋರಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 09, 2023 07:14 PM
Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More