AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಶೈಲದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಶ್ರೀಶೈಲದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

ಸುಷ್ಮಾ ಚಕ್ರೆ
|

Updated on:Oct 16, 2025 | 2:57 PM

Share

ಪ್ರಧಾನಿ ಮೋದಿ ತಮ್ಮ ಆಂಧ್ರಪ್ರದೇಶದ ಪ್ರವಾಸದ ಅಂಗವಾಗಿ ಶ್ರೀಶೈಲದಲ್ಲಿ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥನೆಯ ಅಂಗವಾಗಿ ಮೋದಿಯವರು ಶ್ರೀಶೈಲ ಮಲ್ಲಣ್ಣನಿಗೆ ಪಂಚಾಮೃತಗಳೊಂದಿಗೆ ರುದ್ರಾಭಿಷೇಕ ನೆರವೇರಿಸಿದರು. ನಂತರ ಭ್ರಮರಾಂಬಿಕಾ ಖಡ್ಗಮಾಲಾ, ಕುಮ್ಮಾರಚನೆಯಲ್ಲಿ ಪಾಲ್ಗೊಂಡರು. ಮಲ್ಲಣ್ಣನ ಸನ್ನಿಧಿಯಲ್ಲಿ ಪ್ರಧಾನಿ ಮೋದಿ ಸುಮಾರು 50 ನಿಮಿಷ ಕಾಲ ಕಳೆದರು.

ಶ್ರೀಶೈಲ, ಅಕ್ಟೋಬರ್ 16: ಆಂಧ್ರಪ್ರದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ನಂದ್ಯಾಲ್ ಜಿಲ್ಲೆಯ ಶ್ರೀಶೈಲಂನಲ್ಲಿರುವ (Srisailam) ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಹಸುವಿನ ಹಾಲು, ಮೊಸರು, ತುಪ್ಪ, ಜೇನುತುಪ್ಪ ಮತ್ತು ಸಕ್ಕರೆಯ ಪವಿತ್ರ ಮಿಶ್ರಣವಾದ ಪಂಚಾಮೃತ ಬಳಸಿ ದೇವರಿಗೆ ರುದ್ರಾಭಿಷೇಕ ನೆರವೇರಿಸಿದರು. ನಂತರ ದೇವಾಲಯದಲ್ಲಿ ಸ್ವಲ್ಪ ಸಮಯ ಧ್ಯಾನ ಮಾಡಿ ಪ್ರಾರ್ಥನೆ ಸಲ್ಲಿಸಿದರು.

ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವು 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ಇದು 52 ಶಕ್ತಿ ಪೀಠಗಳಲ್ಲಿ ಒಂದಾಗಿರುವುದರಿಂದ ವಿಶೇಷ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಇದರ ವಿಶೇಷತೆಯೆಂದರೆ ಒಂದೇ ದೇವಾಲಯ ಸಂಕೀರ್ಣದೊಳಗೆ ಜ್ಯೋತಿರ್ಲಿಂಗ ಮತ್ತು ಶಕ್ತಿ ಪೀಠವೆರಡೂ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 16, 2025 02:53 PM