ಮೋದಿ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ; ಕಲಾವಿದರ ಉತ್ಸಾಹ ಹೇಗಿದೆ ನೋಡಿ

Updated on: Nov 28, 2025 | 12:09 PM

ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿಗೆ ಭೇಟಿ ನೀಡಿದ್ದು, ನಗರದಲ್ಲಿ ಭದ್ರತಾ ಸಿಬ್ಬಂದಿಯ ಕಣ್ಗಾವಲಿನಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಬನ್ನಂಜಿಯಲ್ಲಿರುವ ಮೊದಲ ಪಾಯಿಂಟ್‌ನಲ್ಲಿ ಮೋದಿ ಅವರನ್ನು ಸ್ವಾಗತಿಸಲು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ದರ್ಪಣ ನೃತ್ಯ ಸಂಸ್ಥೆಯ ಕಲಾವಿದರು ರಾಧಾಕೃಷ್ಣ ಕಾನ್ಸೆಪ್ಟ್ ಆಧರಿತ ನೃತ್ಯವನ್ನು ಪ್ರಸ್ತುತಪಡಿಸಲು ಸಜ್ಜಾಗಿದ್ದಾರೆ. ಒಟ್ಟು 24 ಕಲಾವಿದರ ತಂಡ ಪ್ರದರ್ಶನ ನೀಡಲಿದೆ.

ಉಡುಪಿ, ನವೆಂಬರ್ 28: ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿಗೆ ಭೇಟಿ ನೀಡಿದ್ದು, ನಗರದಲ್ಲಿ ಭದ್ರತಾ ಸಿಬ್ಬಂದಿಯ ಕಣ್ಗಾವಲಿನಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಬನ್ನಂಜಿಯಲ್ಲಿರುವ ಮೊದಲ ಪಾಯಿಂಟ್‌ನಲ್ಲಿ ಮೋದಿ ಅವರನ್ನು ಸ್ವಾಗತಿಸಲು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ದರ್ಪಣ ನೃತ್ಯ ಸಂಸ್ಥೆಯ ಕಲಾವಿದರು ರಾಧಾಕೃಷ್ಣ ಕಾನ್ಸೆಪ್ಟ್ ಆಧರಿತ ನೃತ್ಯವನ್ನು ಪ್ರಸ್ತುತಪಡಿಸಲು ಸಜ್ಜಾಗಿದ್ದಾರೆ. ಒಟ್ಟು 24 ಕಲಾವಿದರ ತಂಡ ಪ್ರದರ್ಶನ ನೀಡಲಿದೆ. ಭದ್ರತಾ ಸಿಬ್ಬಂದಿಯಿಂದ ಸಂಪೂರ್ಣ ಪರಿಶೀಲನೆ ನಡೆಸಲಾಗಿದ್ದು, ನೃತ್ಯದ ವೇಷಭೂಷಣಗಳನ್ನು ಹೊಂದಿರುವ ಬ್ಯಾಗ್‌ಗಳನ್ನೂ ಕೂಲಂಕುಷವಾಗಿ ತಪಾಸಣೆ ಮಾಡಲಾಗಿದೆ. ವಾಹನ ಸೌಕರ್ಯದ ಕೊರತೆಯ ನಡುವೆಯೂ ಕಲಾವಿದರು ಕಾಲ್ನಡಿಗೆಯಲ್ಲಿ ಆಗಮಿಸಿ ಸಿದ್ಧತೆ ನಡೆಸುತ್ತಿದ್ದು, ಪ್ರಧಾನಮಂತ್ರಿಗಳ ಮುಂದೆ ಪ್ರದರ್ಶನ ನೀಡುವ ಅವಕಾಶ ಸಿಕ್ಕಿರುವುದಕ್ಕೆ ಕಲಾವಿದರು ಅತ್ಯಂತ ಉತ್ಸುಕರಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More